ಲಕ್ನೋ: ದಲಿತ ವ್ಯಕ್ತಿಯೊಬ್ಬ ವಿದ್ಯುತ್ ವೈರಿಂಗ್ ಅನ್ನು ಪರಿಶೀಲಿಸಿದ್ದಕ್ಕಾಗಿ ಆತನ ಮೇಲೆ ಹಲ್ಲೆ ನಡೆಸಿ ಗುತ್ತಿಗೆ ಲೈನ್ ಮ್ಯಾನ್ ನ ಚಪ್ಪಲಿಗಳನ್ನು ನೆಕ್ಕಿಸಿದ ಘಟನೆ ಉತ್ತರ ಪ್ರದೇಶದ ಸೋನ್ ಭದ್ರಾ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ಗುರುವಾರ ನಡೆದಿದ್ದು, ಶನಿವಾರದಂದು ಅದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ವೀಡಿಯೋ ಒಂದರಲ್ಲಿ, 21 ವರ್ಷದ ದಲಿತ ವ್ಯಕ್ತಿಯ ಮೇಲೆ ವಿದ್ಯುತ್ ಕಾರ್ಮಿಕರು ಅಮಾನುಷವಾಗಿ ಹಲ್ಲೆ ನಡೆಸಿ ನಿಂದಿಸುತ್ತಿರುವುದನ್ನು ಕಾಣಬಹುದು ಮತ್ತು ವೀಡಿಯೊವನ್ನು ಚಿತ್ರೀಕರಿಸಿದ ವ್ಯಕ್ತಿಯನ್ನು “ವಾಟ್ಸಪ್ ಗ್ರೂಪ್ ನಲ್ಲಿ” ಹಂಚಿಕೊಳ್ಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಎರಡನೇ ವೀಡಿಯೊದಲ್ಲಿ, ಆ ವ್ಯಕ್ತಿ ಕೆಲಸಗಾರನ ಚಪ್ಪಲಿಗಳನ್ನು ನೆಕ್ಕುತ್ತಿರುವುದನ್ನು ಮತ್ತು ಅವನ ಕಿವಿಗಳನ್ನು ಹಿಡಿದುಕೊಂಡು ಕ್ಷಮೆಯಾಚಿಸುವುದನ್ನು ಕಾಣಬಹುದು.
ಸೋನ್ ಭದ್ರಾ ಜಿಲ್ಲೆಯ ಶಹಗಂಜ್ ಪ್ರದೇಶದಲ್ಲಿ ಗುತ್ತಿಗೆ ಲೈನ್ಮ್ಯಾನ್ ಆಗಿರುವ ತೇಜ್ಬಾಲಿ ಸಿಂಗ್ ಪಟೇಲ್ ಎಂದು ಗುರುತಿಸಲಾದ ಆರೋಪಿಯ ವಿರುದ್ಧ ಪೊಲೀಸರು ಶಹಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಾಜೇಂದ್ರ ಚಮರ್ ಅವರು ಶಹಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಪ್ರಕರಣ ದಾಖಲಾಗಿದ್ದು, ಪಟೇಲ್ ನನ್ನು ಬಂಧಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಚಾಮರ್, ‘ನಾನು ನನ್ನ ಚಿಕ್ಕಪ್ಪನ ಮನೆಗೆ ಹೋಗಿದ್ದೆ. ವಿದ್ಯುತ್ ತಂತಿಯಲ್ಲಿ ಸ್ವಲ್ಪ ಸಮಸ್ಯೆ ಇತ್ತು ಮತ್ತು ನಾನು ಅದನ್ನು ನೋಡುತ್ತಿದ್ದೆ. ತೇಜ್ಬಲಿ ಅಲ್ಲಿಗೆ ಬಂದು ನನ್ನ ಮೇಲೆ ದೊಣ್ಣೆಗಳಿಂದ ಹಲ್ಲೆ ಮಾಡಲು ಆರಂಭಿಸಿದ. ಅವನು ನನ್ನ ಪಾದರಕ್ಷೆಗೆ ಉಗುಳಿ ನೆಕ್ಕುವಂತೆ ಮಾಡಿದನು. ಎರಡು ದಿನ ನಾನು ಏನನ್ನೂ ಹೇಳಲಿಲ್ಲ. ಆದರೆ ಈಗ ಪ್ರಕರಣ ದಾಖಲಿಸಲು ಬಂದಿದ್ದೇನೆ’ ಎಂದಿದ್ದಾರೆ.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…