ಹುಬ್ಬಳ್ಳಿ : ವೀರಶೈವ ಸಮುದಾಯ ಯಾವುದೇ ಸಂಸ್ಥೆಯ ಅಡಿಯಲ್ಲಿ ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರಿಗೆ ನಾವು ಗೌರವ ಕೊಡುತ್ತೇವೆ. ಚುನಾವಣೆ ವೇಳೆ ಪಕ್ಷಕ್ಕೆ ಸಂಸ್ಥೆ ಹೆಸರು ಬಳಸುವುದು ಸರಿಯಲ್ಲ. ಲಿಂಗಾಯತ ವೇದಿಕೆ ಎನ್ನುವುದು ಒಂದು ಕಾಲ್ಪನಿಕ ಸಂಘಟನೆ. ನಾಲ್ಕು ಜನ ಸೇರಿ ಏನೋ ಹೇಳಿದರೇ ಲಿಂಗಾಯತರ ಧ್ವನಿ ಆಗುತ್ತಾ? ಲಿಂಗಾಯತ ಸಮುದಾಯ ಸಮುದ್ರವಿದ್ದಂತೆ. ಲಿಂಗಾಯತ ವೇದಿಕೆ ಚುನಾವಣೆ ವೇಳೆ ಹುಟ್ಟಿಕೊಂಡ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ನಿಂದ ಭ್ರಷ್ಟಾಚಾರ ಆರೋಪ ವಿಚಾರವಾಗಿ ಮಾತನಾಡಿದ ಅವರು ಭ್ರಷ್ಟಾಚಾರದ ದಾಖಲೆ ಕೊಡುವಂತೆ ಚುಣಾವಣಾ ಆಯೋಗ ಕೇಳಿದೆ. ನಮ್ಮ ವಿರುದ್ಧ ಯಾವುದೇ ಕೇಸ್ ದಾಖಲಾಗಿಲ್ಲ, ಸಾಕ್ಷಿ ಕೂಡ ಇಲ್ಲ. ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್ಸಿಗರ ಮೇಲೆಯೇ ಭ್ರಷ್ಟಾಚಾರ ಕೇಸ್ ಇದೆ. ತಮ್ಮ ಮೇಲೆಯೇ ಕೇಸ್ ಇದ್ದು, ಕೋರ್ಟ್ಗೆ ಅಲೆದಾಡುತ್ತಿದ್ದಾರೆ. ಯಾವ ನೈತಿಕತೆಯಿಂದ ನಮ್ಮನ್ನು ಪ್ರಶ್ನಿಸುತ್ತಾರೆ ಎಂದು ವಾಗ್ದಾಳಿ ಮಾಡಿದರು.
ಐಟಿ ಅಧಿಕಾರಿಗಳ ದಾಳಿ ವಿಚಾರವಾಗಿ ಮಾತನಾಡಿದ ಅವರು ಐಟಿ ಅಧಿಕಾರಿಗಳು ಎಲ್ಲ ಜಿಲ್ಲೆಯಲ್ಲಿ ಇದ್ದಾರೆ. ಎಲ್ಲಿ ತಪ್ಪು ನಡೆಯುತ್ತೆ ಅಂತ ಅವರಿಗೆ ಮಾಹಿತಿ ಇರುತ್ತೆ. ಕಾಂಗ್ರೆಸ್ನವರು ತಪ್ಪ ಮಾಡಿದರೇ ನಾವು ಏನ್ ಮಾಡೋಕಾಗುತ್ತೆ? ಕಾಂಗ್ರೆಸ್ನವರು ಮೊದಲೇ ಹೇಳುತ್ತಾರೆ ರೈಡ್ ಅಗುತ್ತೆ ಅಂತ. ಎಂಬಿ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಮೊದಲೇ ಹೇಳಿ ಬಿಡೋದು. ಇದು ಕಾಂಗ್ರೆಸ್ ನವರ ತಂತ್ರಗಾರಿಕೆ. ಮೊದಲ ತಪ್ಪು ಮಾಡೋದನ್ನು ಕಾಂಗ್ರೆಸ್ ಬಿಡಲಿ ಎಂದು ತಿರುಗೇಟು ನೀಡಿದರು.
ಇನ್ನು ಬಿಜೆಪಿ ಕೇಂದ್ರ ನಾಯಕರ ರಾಜ್ಯ ಪ್ರವಾಸ ಕುರಿತು ಮಾತನಾಡಿದ ಅವರು ನಮ್ಮ ರಾಷ್ಟ್ರೀಯ ನಾಯಕರ ಎಲ್ಲ ಚುನಾವಣೆಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ. ರಾಷ್ಟ್ರೀಯ ನಾಯಕರದ್ದು ಹಾಗೂ ಕರ್ನಾಟಕದ ಜನರದ್ದು ಭಾವನಾತ್ಮಕ ಸಂಬಂಧವಿದೆ. ಇದರಿಂದ ದೊಡ್ಡ ಮಟ್ಟದಲ್ಲಿ ಬೂಸ್ಟರ್ ಡೋಸ್ ಸಿಗಲಿದೆ. ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ. ಎಲ್ಲಾ ನಾಯಕರು ಬಹಿರಂಗ ಸಭೆ, ರೋಡ್ ಶೋ ನಡೆಸುತ್ತಿದ್ದಾರೆ. 224 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ ಎಂದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…