ಹುಬ್ಬಳ್ಳಿ : ವೀರಶೈವ ಸಮುದಾಯ ಯಾವುದೇ ಸಂಸ್ಥೆಯ ಅಡಿಯಲ್ಲಿ ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರಿಗೆ ನಾವು ಗೌರವ ಕೊಡುತ್ತೇವೆ. ಚುನಾವಣೆ ವೇಳೆ ಪಕ್ಷಕ್ಕೆ ಸಂಸ್ಥೆ ಹೆಸರು ಬಳಸುವುದು ಸರಿಯಲ್ಲ. ಲಿಂಗಾಯತ ವೇದಿಕೆ ಎನ್ನುವುದು ಒಂದು ಕಾಲ್ಪನಿಕ ಸಂಘಟನೆ. ನಾಲ್ಕು ಜನ ಸೇರಿ ಏನೋ ಹೇಳಿದರೇ ಲಿಂಗಾಯತರ ಧ್ವನಿ ಆಗುತ್ತಾ? ಲಿಂಗಾಯತ ಸಮುದಾಯ ಸಮುದ್ರವಿದ್ದಂತೆ. ಲಿಂಗಾಯತ ವೇದಿಕೆ ಚುನಾವಣೆ ವೇಳೆ ಹುಟ್ಟಿಕೊಂಡ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ನಿಂದ ಭ್ರಷ್ಟಾಚಾರ ಆರೋಪ ವಿಚಾರವಾಗಿ ಮಾತನಾಡಿದ ಅವರು ಭ್ರಷ್ಟಾಚಾರದ ದಾಖಲೆ ಕೊಡುವಂತೆ ಚುಣಾವಣಾ ಆಯೋಗ ಕೇಳಿದೆ. ನಮ್ಮ ವಿರುದ್ಧ ಯಾವುದೇ ಕೇಸ್ ದಾಖಲಾಗಿಲ್ಲ, ಸಾಕ್ಷಿ ಕೂಡ ಇಲ್ಲ. ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್ಸಿಗರ ಮೇಲೆಯೇ ಭ್ರಷ್ಟಾಚಾರ ಕೇಸ್ ಇದೆ. ತಮ್ಮ ಮೇಲೆಯೇ ಕೇಸ್ ಇದ್ದು, ಕೋರ್ಟ್ಗೆ ಅಲೆದಾಡುತ್ತಿದ್ದಾರೆ. ಯಾವ ನೈತಿಕತೆಯಿಂದ ನಮ್ಮನ್ನು ಪ್ರಶ್ನಿಸುತ್ತಾರೆ ಎಂದು ವಾಗ್ದಾಳಿ ಮಾಡಿದರು.
ಐಟಿ ಅಧಿಕಾರಿಗಳ ದಾಳಿ ವಿಚಾರವಾಗಿ ಮಾತನಾಡಿದ ಅವರು ಐಟಿ ಅಧಿಕಾರಿಗಳು ಎಲ್ಲ ಜಿಲ್ಲೆಯಲ್ಲಿ ಇದ್ದಾರೆ. ಎಲ್ಲಿ ತಪ್ಪು ನಡೆಯುತ್ತೆ ಅಂತ ಅವರಿಗೆ ಮಾಹಿತಿ ಇರುತ್ತೆ. ಕಾಂಗ್ರೆಸ್ನವರು ತಪ್ಪ ಮಾಡಿದರೇ ನಾವು ಏನ್ ಮಾಡೋಕಾಗುತ್ತೆ? ಕಾಂಗ್ರೆಸ್ನವರು ಮೊದಲೇ ಹೇಳುತ್ತಾರೆ ರೈಡ್ ಅಗುತ್ತೆ ಅಂತ. ಎಂಬಿ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಮೊದಲೇ ಹೇಳಿ ಬಿಡೋದು. ಇದು ಕಾಂಗ್ರೆಸ್ ನವರ ತಂತ್ರಗಾರಿಕೆ. ಮೊದಲ ತಪ್ಪು ಮಾಡೋದನ್ನು ಕಾಂಗ್ರೆಸ್ ಬಿಡಲಿ ಎಂದು ತಿರುಗೇಟು ನೀಡಿದರು.
ಇನ್ನು ಬಿಜೆಪಿ ಕೇಂದ್ರ ನಾಯಕರ ರಾಜ್ಯ ಪ್ರವಾಸ ಕುರಿತು ಮಾತನಾಡಿದ ಅವರು ನಮ್ಮ ರಾಷ್ಟ್ರೀಯ ನಾಯಕರ ಎಲ್ಲ ಚುನಾವಣೆಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ. ರಾಷ್ಟ್ರೀಯ ನಾಯಕರದ್ದು ಹಾಗೂ ಕರ್ನಾಟಕದ ಜನರದ್ದು ಭಾವನಾತ್ಮಕ ಸಂಬಂಧವಿದೆ. ಇದರಿಂದ ದೊಡ್ಡ ಮಟ್ಟದಲ್ಲಿ ಬೂಸ್ಟರ್ ಡೋಸ್ ಸಿಗಲಿದೆ. ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ. ಎಲ್ಲಾ ನಾಯಕರು ಬಹಿರಂಗ ಸಭೆ, ರೋಡ್ ಶೋ ನಡೆಸುತ್ತಿದ್ದಾರೆ. 224 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ ಎಂದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…