BREAKING NEWS

ಮದ್ಯದ ದರ ಹೆಚ್ಚಳ ಮಾಡಲಾಗಿಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್

ಬೆಂಗಳೂರು: ಮದ್ಯದ ದರವನ್ನು ಹೆಚ್ಚಳ ಮಾಡುವ ಪ್ರಸ್ತಾಪ ನಮ್ಮ ಇಲಾಖೆಯ ಮುಂದಿಲ್ಲ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮದ್ಯದ ದರ ಹೆಚ್ಚಳದ ಬಗ್ಗೆ ಮಾಹಿತಿ ಇಲ್ಲ. ಇದುವರೆಗೂ ದರ ಹೆಚ್ಚಳ ಮಾಡಲಾಗಿಲ್ಲ. ಈ ಸಂಬಂಧ ಅಬಕಾರಿ ಇಲಾಖೆಯಿಂದ ಯಾವುದೇ ಸೂಚನೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.

ಆರ್ಥಿಕ ಇಲಾಖೆ, ಪಾನಿಯಾ ನಿಗಮದಿಂದಲೂ ಮದ್ಯದ ದರ ಏರಿಕೆ ಹಾಗೂ ಪ್ರಸ್ತಾಪ ಬಂದಿಲ್ಲ ಎಂದು ಅವರು ಹೇಳಿದರು.

ಅಬಕಾರಿ ಇಲಾಖೆಯಿಂದ ಯಾವುದೇ ದರ ಏರಿಕೆ ಮಾಡಿಲ್ಲ. ನನಗೆ ಮಾಹಿತಿಯೂ ಇಲ್ಲ. ದರ ಏರಿಕೆ ಇದುವರೆಗೂ ಆಗಿಲ್ಲ. ಪರಿಶೀಲನೆ ಮಾಡಿ ಹೇಳುತ್ತೇನೆ ಎಂದು ಹೇಳಿದರು. ಕಳೆದ ಒಂದು ವಾರದಿಂದ ಬಿಯರ್ ದರ 20 ರೂ. ಜಾಸ್ತಿ ಆಗಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೇಕಾದರೆ ನಾವು ವಾಸ್ತವ ಪರಿಶೀಲನೆ ಮಾಡುತ್ತೇವೆ. ದರ ಏರಿಕೆ ಮಾಡಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು..

ರಾಜ್ಯದಲ್ಲಿ ಇತ್ತೀಚೆಗಷ್ಟೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಸರ್ಕಾರ ಒಂದೆಡೆ ತಾವು ಘೋಷಣೆ ಮಾಡಿದ್ದ ಐದು ಯೋಜನೆಗಳಲ್ಲಿ ಒಂದೊಂದನ್ನೇ ಜಾರಿ ಮಾಡುತ್ತಿದ್ದರೆ, ಇನ್ನೊಂದೆಡೆ ವಿದ್ಯುತ್​ ಬಿಲ್​ ಹೆಚ್ಚಳ ಹಾಗೂ ಮದ್ಯದ ದರ ಹೆಚ್ಚಳ ಮಾಡಿದೆ ಎನ್ನುವ ದೂರುಗಳಿವೆ. ವಾರದ ಹಿಂದೆ ಮಹಿಳೆಯರಿಗೆ ಉಚಿತ್​ ಬಸ್​ ಸಂಚಾರ ಸೇವೆ ಪ್ರಾರಂಭಿಸಿದ್ದ ಸರ್ಕಾರ ಜೊತೆ ಜೊತೆಗೆ ಮದ್ಯಪ್ರಿಯರಿಗೆ ದರ ಏರಿಕೆ ಮಾಡುವ ಮೂಲಕ ಶಾಕ್​ ಕೊಟ್ಟಿದೆ ಎಂದು ಹೇಳಲಾಗುತ್ತಿದೆ.

ಸರ್ಕಾರ ಶೇ 20ರಷ್ಟು ಮದ್ಯದ ಬೆಲೆ ಏರಿಕೆ ಮಾಡಿದೆ. ಬಿಯರ್​ಗೆ 10 ರೂ ಏರಿಕೆಯಾಗಿದೆ. ಇನ್ನುಳಿದ ಮದ್ಯದ ವಿವಿಧ ಬ್ರ್ಯಾಂಡ್​ಗಳಿಗೆ ಬೇರೆ ಬೇರೆ ರೀತಿಯಲ್ಲಿ ದರ ಹೆಚ್ಚಳ ಮಾಡಿದೆ. ಬಿಯರ್​ ಮೇಲೆ ಶೇ 20 ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದೆ. ಸರ್ಕಾರ ತನ್ನ ಬೊಕ್ಕಸ ಭರ್ತಿ ಮಾಡಲು ಈ ರೀತಿಯ ಆದಾಯದ ದಾರಿ ಕಂಡುಕೊಂಡಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಮದ್ಯದ ಬೆಲೆ ಏರಿಕೆ ಮಾತ್ರವಲ್ಲದೆ, ಮದ್ಯದ ಲೈಸೆನ್ಸ್​ ದರವನ್ನೂ ಸರ್ಕಾರ ಹೆಚ್ಚಳ ಮಾಡಿತ್ತು.

2016ರಿಂದ ಲಿಕ್ಕರ್​ ಲೈಸನ್ಸ್​ ದರ ಹೆಚ್ಚಳ ಮಾಡಿರಲಿಲ್ಲ. ಹಾಗಾಗಿ ಲಿಕ್ಕರ್​ ಲೈಸನ್ಸ್​ ಶುಲ್ಕವನ್ನು ಶೇ 25ರಷ್ಟು ಹೆಚ್ಚಳ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿತ್ತು. ಈಗಾಗಲೇ ಸರ್ಕಾರ ಮುಂದಿನ ವರ್ಷಕ್ಕೆ ಆದಾಯ ಟಾರ್ಗೆಟ್​ ಮಾಡಿಕೊಂಡಿದ್ದು, ಅದನ್ನು ಗಳಿಸಲು ಸರ್ಕಾರ ಹಲವು ದಾರಿಗಳನ್ನು ಕಂಡುಕೊಳ್ಳುತ್ತಿದೆ. ಸರ್ಕಾರದ ಈ ದರ ಹೆಚ್ಚಳದ ನೀತಿಗೆ ಮದ್ಯಪ್ರಿಯರು ಹಾಗೂ ಮದ್ಯದ ಸಂಘಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅಬಕಾರಿ ಇಲಾಖೆ ಸಚಿವ ಆರ್.ಬಿ. ತಿಮ್ಮಾಪೂರ್​ ಅವರು ತಮ್ಮ ಸರ್ಕಾರ ಮದ್ಯದ ಬೆಲೆಯನ್ನು ಹೆಚ್ಚಳ ಮಾಡಿಲ್ಲ ಎನ್ನುವ ಸ್ಪಷ್ಟನೆ ಕೊಟ್ಟಿದ್ದಾರೆ.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

5 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago