BREAKING NEWS

ಮದ್ಯದ ದರ ಹೆಚ್ಚಳ ಮಾಡಲಾಗಿಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್

ಬೆಂಗಳೂರು: ಮದ್ಯದ ದರವನ್ನು ಹೆಚ್ಚಳ ಮಾಡುವ ಪ್ರಸ್ತಾಪ ನಮ್ಮ ಇಲಾಖೆಯ ಮುಂದಿಲ್ಲ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮದ್ಯದ ದರ ಹೆಚ್ಚಳದ ಬಗ್ಗೆ ಮಾಹಿತಿ ಇಲ್ಲ. ಇದುವರೆಗೂ ದರ ಹೆಚ್ಚಳ ಮಾಡಲಾಗಿಲ್ಲ. ಈ ಸಂಬಂಧ ಅಬಕಾರಿ ಇಲಾಖೆಯಿಂದ ಯಾವುದೇ ಸೂಚನೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.

ಆರ್ಥಿಕ ಇಲಾಖೆ, ಪಾನಿಯಾ ನಿಗಮದಿಂದಲೂ ಮದ್ಯದ ದರ ಏರಿಕೆ ಹಾಗೂ ಪ್ರಸ್ತಾಪ ಬಂದಿಲ್ಲ ಎಂದು ಅವರು ಹೇಳಿದರು.

ಅಬಕಾರಿ ಇಲಾಖೆಯಿಂದ ಯಾವುದೇ ದರ ಏರಿಕೆ ಮಾಡಿಲ್ಲ. ನನಗೆ ಮಾಹಿತಿಯೂ ಇಲ್ಲ. ದರ ಏರಿಕೆ ಇದುವರೆಗೂ ಆಗಿಲ್ಲ. ಪರಿಶೀಲನೆ ಮಾಡಿ ಹೇಳುತ್ತೇನೆ ಎಂದು ಹೇಳಿದರು. ಕಳೆದ ಒಂದು ವಾರದಿಂದ ಬಿಯರ್ ದರ 20 ರೂ. ಜಾಸ್ತಿ ಆಗಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೇಕಾದರೆ ನಾವು ವಾಸ್ತವ ಪರಿಶೀಲನೆ ಮಾಡುತ್ತೇವೆ. ದರ ಏರಿಕೆ ಮಾಡಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು..

ರಾಜ್ಯದಲ್ಲಿ ಇತ್ತೀಚೆಗಷ್ಟೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಸರ್ಕಾರ ಒಂದೆಡೆ ತಾವು ಘೋಷಣೆ ಮಾಡಿದ್ದ ಐದು ಯೋಜನೆಗಳಲ್ಲಿ ಒಂದೊಂದನ್ನೇ ಜಾರಿ ಮಾಡುತ್ತಿದ್ದರೆ, ಇನ್ನೊಂದೆಡೆ ವಿದ್ಯುತ್​ ಬಿಲ್​ ಹೆಚ್ಚಳ ಹಾಗೂ ಮದ್ಯದ ದರ ಹೆಚ್ಚಳ ಮಾಡಿದೆ ಎನ್ನುವ ದೂರುಗಳಿವೆ. ವಾರದ ಹಿಂದೆ ಮಹಿಳೆಯರಿಗೆ ಉಚಿತ್​ ಬಸ್​ ಸಂಚಾರ ಸೇವೆ ಪ್ರಾರಂಭಿಸಿದ್ದ ಸರ್ಕಾರ ಜೊತೆ ಜೊತೆಗೆ ಮದ್ಯಪ್ರಿಯರಿಗೆ ದರ ಏರಿಕೆ ಮಾಡುವ ಮೂಲಕ ಶಾಕ್​ ಕೊಟ್ಟಿದೆ ಎಂದು ಹೇಳಲಾಗುತ್ತಿದೆ.

ಸರ್ಕಾರ ಶೇ 20ರಷ್ಟು ಮದ್ಯದ ಬೆಲೆ ಏರಿಕೆ ಮಾಡಿದೆ. ಬಿಯರ್​ಗೆ 10 ರೂ ಏರಿಕೆಯಾಗಿದೆ. ಇನ್ನುಳಿದ ಮದ್ಯದ ವಿವಿಧ ಬ್ರ್ಯಾಂಡ್​ಗಳಿಗೆ ಬೇರೆ ಬೇರೆ ರೀತಿಯಲ್ಲಿ ದರ ಹೆಚ್ಚಳ ಮಾಡಿದೆ. ಬಿಯರ್​ ಮೇಲೆ ಶೇ 20 ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದೆ. ಸರ್ಕಾರ ತನ್ನ ಬೊಕ್ಕಸ ಭರ್ತಿ ಮಾಡಲು ಈ ರೀತಿಯ ಆದಾಯದ ದಾರಿ ಕಂಡುಕೊಂಡಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಮದ್ಯದ ಬೆಲೆ ಏರಿಕೆ ಮಾತ್ರವಲ್ಲದೆ, ಮದ್ಯದ ಲೈಸೆನ್ಸ್​ ದರವನ್ನೂ ಸರ್ಕಾರ ಹೆಚ್ಚಳ ಮಾಡಿತ್ತು.

2016ರಿಂದ ಲಿಕ್ಕರ್​ ಲೈಸನ್ಸ್​ ದರ ಹೆಚ್ಚಳ ಮಾಡಿರಲಿಲ್ಲ. ಹಾಗಾಗಿ ಲಿಕ್ಕರ್​ ಲೈಸನ್ಸ್​ ಶುಲ್ಕವನ್ನು ಶೇ 25ರಷ್ಟು ಹೆಚ್ಚಳ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿತ್ತು. ಈಗಾಗಲೇ ಸರ್ಕಾರ ಮುಂದಿನ ವರ್ಷಕ್ಕೆ ಆದಾಯ ಟಾರ್ಗೆಟ್​ ಮಾಡಿಕೊಂಡಿದ್ದು, ಅದನ್ನು ಗಳಿಸಲು ಸರ್ಕಾರ ಹಲವು ದಾರಿಗಳನ್ನು ಕಂಡುಕೊಳ್ಳುತ್ತಿದೆ. ಸರ್ಕಾರದ ಈ ದರ ಹೆಚ್ಚಳದ ನೀತಿಗೆ ಮದ್ಯಪ್ರಿಯರು ಹಾಗೂ ಮದ್ಯದ ಸಂಘಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅಬಕಾರಿ ಇಲಾಖೆ ಸಚಿವ ಆರ್.ಬಿ. ತಿಮ್ಮಾಪೂರ್​ ಅವರು ತಮ್ಮ ಸರ್ಕಾರ ಮದ್ಯದ ಬೆಲೆಯನ್ನು ಹೆಚ್ಚಳ ಮಾಡಿಲ್ಲ ಎನ್ನುವ ಸ್ಪಷ್ಟನೆ ಕೊಟ್ಟಿದ್ದಾರೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

6 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

6 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

7 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

8 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

9 hours ago