BREAKING NEWS

ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಯಾರಿಗೆಲ್ಲಾ ಸ್ಥಾನ?

ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಬೈರತಿ ಬಸವರಾಜ್‌ ಅವರು ಉಪಾಧ್ಯಕ್ಷರಾಗಿದ್ದರೆ, ಮತ್ತೊಬ್ಬ ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಶನಿವಾರ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಯಾರಿಗೆ ಯಾವ ಹುದ್ದೆಗಳು?

ಹತ್ತು ಉಪಾಧ್ಯಕ್ಷರು : ಮಾಜಿ ಸಚಿವರಾದ ಮುರುಗೇಶ್ ನಿರಾಣಿ (ಬಾಗಲಕೋಟೆ), ಬೈರತಿ ಬಸವರಾಜ್ (ಬೆಂಗಳೂರು), ನಾಯಕರಾದ ರಾಜುಗೌಡ ನಾಯಕ್ (ಯಾದಗಿರಿ), ಎನ್ ಮಹೇಶ್ (ಚಾಮರಾಜನಗರ), ಅನಿಲ್ ಬೆನಕೆ (ಬೆಳಗಾವಿ), ಹರತಾಳು ಹಾಲಪ್ಪ (ಶಿವಮೊಗ್ಗ), ರೂಪಾಲಿ ನಾಯಕ್ (ಉತ್ತರ ಕನ್ನಡ), ಡಾ. ಬಸವರಾಜ್ ಕೇಲಗಾರ (ಹಾವೇರಿ), ಮಾಳವಿಕಾ ಅವಿನಾಶ್ (ಬೆಂಗಳೂರು) ಹಾಗೂ ಎಂ. ರಾಜೇಂದ್ರ (ಮೈಸೂರು) ಅವರನ್ನು ನೇಮಿಸಲಾಗಿದೆ.

ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು : ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕುಡಚಿಯ ಪಿ ರಾಜೀವ್, ಬೆಂಗಳೂರಿನ ನಂದೀಶ್ ರೆಡ್ಡಿ, ಹಾಸನ ಪ್ರೀತಮ್ ಗೌಡ ನೇಮಕಗೊಂಡಿದ್ದಾರೆ.

1೦ ಮಂದಿ ರಾಜ್ಯ ಕಾರ್ಯದರ್ಶಿಗಳು: ಬೀದರ್‌ನ ಶೈಲೇಂದ್ರ ಬೆಲ್ದಾಳೆ, ಶಿವಮೊಗ್ಗ ಡಿ.ಎಸ್ ಅರುಣ್, ಕಲಬುರಗಿಯ ಬಸವರಾಜ್ ಮತ್ತಿಮೋಡ್, ಚಿಕ್ಕಬಳ್ಳಾಪುರದ ಸಿ ಮುನಿರಾಜು, ತುಮಕೂರಿನ ವಿನಯ್ ಬಿದರೆ, ಮಂಗಳೂರಿನ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೊಪ್ಪಳದ ಶರಣು ತಳ್ಳಕೇರಿ, ಯಾದಗಿರಿಯ ಲಲಿತಾ ಅನಾಪುರ, ಮಂಡ್ಯದ ಲಕ್ಷ್ಮೀ ಅಶ್ವಿನ್ ಗೌಡ, ತುಮಕೂರಿನ ಅಂಬಿಕಾ ಹುಲಿನಾಯ್ಕರ್ ನೇಮಕ.

ಬಿಜೆಪಿ ರಾಜ್ಯ ಖಚಾಂಚಿಯಾಗಿ ಬೆಂಗಳೂರಿನ ಸುಬ್ಬ ನರಸಿಂಹ ಅವರನ್ನು ಮುಂದುವರಿಸಲಾಗಿದೆ.

ವಿವಿಧ ಮೋರ್ಚಾಗಳ ರಾಜ್ಯಾಧ್ಯಕ್ಷರು:
ಮಹಿಳಾ ಮೋರ್ಚಾ: ಸಿ ಮಂಜುಳಾ (ಮಾಜಿ ಮಹಿಳಾ ಆಯೋಗ ಅಧ್ಯಕ್ಷೆ)
ಯುವಮೋರ್ಚಾ: ಧೀರಜ್ ಮುನಿರಾಜು (ದೊಡ್ಡಬಳ್ಳಾಪುರ ಶಾಸಕ)
ಎಸ್ಟಿ ಮೋರ್ಚಾ: ಬಂಗಾರು ಹನುಮಂತ್, ಬಳ್ಳಾರಿ
ಎಸ್ಸಿ ಮೋರ್ಚಾ: ಎಸ್ ಮಂಜುನಾಥ್ (ಸಕಲೇಶಪುರ ಶಾಸಕ)
ಓಬಿಸಿ ಮೋರ್ಚಾ: ರಘು ಕೌಟಿಲ್ಯ. ಮೈಸೂರು
ರೈತ ಮೋರ್ಚಾ: ಎ.ಎಸ್ ಪಾಟೀಲ್ ನಡಹಳ್ಳಿ (ಮಾಜಿ ಶಾಸಕ), ವಿಜಯಪುರ
ಅಲ್ಪಸಂಖ್ಯಾತ ಮೋರ್ಚಾ: ಅನಿಲ್‌ ಥಾಮಸ್‌, ಮೈಸೂರು

andolanait

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

2 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

2 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

2 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

2 hours ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

2 hours ago