BREAKING NEWS

ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಯಾರಿಗೆಲ್ಲಾ ಸ್ಥಾನ?

ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಬೈರತಿ ಬಸವರಾಜ್‌ ಅವರು ಉಪಾಧ್ಯಕ್ಷರಾಗಿದ್ದರೆ, ಮತ್ತೊಬ್ಬ ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಶನಿವಾರ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಯಾರಿಗೆ ಯಾವ ಹುದ್ದೆಗಳು?

ಹತ್ತು ಉಪಾಧ್ಯಕ್ಷರು : ಮಾಜಿ ಸಚಿವರಾದ ಮುರುಗೇಶ್ ನಿರಾಣಿ (ಬಾಗಲಕೋಟೆ), ಬೈರತಿ ಬಸವರಾಜ್ (ಬೆಂಗಳೂರು), ನಾಯಕರಾದ ರಾಜುಗೌಡ ನಾಯಕ್ (ಯಾದಗಿರಿ), ಎನ್ ಮಹೇಶ್ (ಚಾಮರಾಜನಗರ), ಅನಿಲ್ ಬೆನಕೆ (ಬೆಳಗಾವಿ), ಹರತಾಳು ಹಾಲಪ್ಪ (ಶಿವಮೊಗ್ಗ), ರೂಪಾಲಿ ನಾಯಕ್ (ಉತ್ತರ ಕನ್ನಡ), ಡಾ. ಬಸವರಾಜ್ ಕೇಲಗಾರ (ಹಾವೇರಿ), ಮಾಳವಿಕಾ ಅವಿನಾಶ್ (ಬೆಂಗಳೂರು) ಹಾಗೂ ಎಂ. ರಾಜೇಂದ್ರ (ಮೈಸೂರು) ಅವರನ್ನು ನೇಮಿಸಲಾಗಿದೆ.

ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು : ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕುಡಚಿಯ ಪಿ ರಾಜೀವ್, ಬೆಂಗಳೂರಿನ ನಂದೀಶ್ ರೆಡ್ಡಿ, ಹಾಸನ ಪ್ರೀತಮ್ ಗೌಡ ನೇಮಕಗೊಂಡಿದ್ದಾರೆ.

1೦ ಮಂದಿ ರಾಜ್ಯ ಕಾರ್ಯದರ್ಶಿಗಳು: ಬೀದರ್‌ನ ಶೈಲೇಂದ್ರ ಬೆಲ್ದಾಳೆ, ಶಿವಮೊಗ್ಗ ಡಿ.ಎಸ್ ಅರುಣ್, ಕಲಬುರಗಿಯ ಬಸವರಾಜ್ ಮತ್ತಿಮೋಡ್, ಚಿಕ್ಕಬಳ್ಳಾಪುರದ ಸಿ ಮುನಿರಾಜು, ತುಮಕೂರಿನ ವಿನಯ್ ಬಿದರೆ, ಮಂಗಳೂರಿನ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೊಪ್ಪಳದ ಶರಣು ತಳ್ಳಕೇರಿ, ಯಾದಗಿರಿಯ ಲಲಿತಾ ಅನಾಪುರ, ಮಂಡ್ಯದ ಲಕ್ಷ್ಮೀ ಅಶ್ವಿನ್ ಗೌಡ, ತುಮಕೂರಿನ ಅಂಬಿಕಾ ಹುಲಿನಾಯ್ಕರ್ ನೇಮಕ.

ಬಿಜೆಪಿ ರಾಜ್ಯ ಖಚಾಂಚಿಯಾಗಿ ಬೆಂಗಳೂರಿನ ಸುಬ್ಬ ನರಸಿಂಹ ಅವರನ್ನು ಮುಂದುವರಿಸಲಾಗಿದೆ.

ವಿವಿಧ ಮೋರ್ಚಾಗಳ ರಾಜ್ಯಾಧ್ಯಕ್ಷರು:
ಮಹಿಳಾ ಮೋರ್ಚಾ: ಸಿ ಮಂಜುಳಾ (ಮಾಜಿ ಮಹಿಳಾ ಆಯೋಗ ಅಧ್ಯಕ್ಷೆ)
ಯುವಮೋರ್ಚಾ: ಧೀರಜ್ ಮುನಿರಾಜು (ದೊಡ್ಡಬಳ್ಳಾಪುರ ಶಾಸಕ)
ಎಸ್ಟಿ ಮೋರ್ಚಾ: ಬಂಗಾರು ಹನುಮಂತ್, ಬಳ್ಳಾರಿ
ಎಸ್ಸಿ ಮೋರ್ಚಾ: ಎಸ್ ಮಂಜುನಾಥ್ (ಸಕಲೇಶಪುರ ಶಾಸಕ)
ಓಬಿಸಿ ಮೋರ್ಚಾ: ರಘು ಕೌಟಿಲ್ಯ. ಮೈಸೂರು
ರೈತ ಮೋರ್ಚಾ: ಎ.ಎಸ್ ಪಾಟೀಲ್ ನಡಹಳ್ಳಿ (ಮಾಜಿ ಶಾಸಕ), ವಿಜಯಪುರ
ಅಲ್ಪಸಂಖ್ಯಾತ ಮೋರ್ಚಾ: ಅನಿಲ್‌ ಥಾಮಸ್‌, ಮೈಸೂರು

andolanait

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

8 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

8 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

10 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

10 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

11 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

11 hours ago