BREAKING NEWS

ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಯಾರಿಗೆಲ್ಲಾ ಸ್ಥಾನ?

ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಬೈರತಿ ಬಸವರಾಜ್‌ ಅವರು ಉಪಾಧ್ಯಕ್ಷರಾಗಿದ್ದರೆ, ಮತ್ತೊಬ್ಬ ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಶನಿವಾರ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಯಾರಿಗೆ ಯಾವ ಹುದ್ದೆಗಳು?

ಹತ್ತು ಉಪಾಧ್ಯಕ್ಷರು : ಮಾಜಿ ಸಚಿವರಾದ ಮುರುಗೇಶ್ ನಿರಾಣಿ (ಬಾಗಲಕೋಟೆ), ಬೈರತಿ ಬಸವರಾಜ್ (ಬೆಂಗಳೂರು), ನಾಯಕರಾದ ರಾಜುಗೌಡ ನಾಯಕ್ (ಯಾದಗಿರಿ), ಎನ್ ಮಹೇಶ್ (ಚಾಮರಾಜನಗರ), ಅನಿಲ್ ಬೆನಕೆ (ಬೆಳಗಾವಿ), ಹರತಾಳು ಹಾಲಪ್ಪ (ಶಿವಮೊಗ್ಗ), ರೂಪಾಲಿ ನಾಯಕ್ (ಉತ್ತರ ಕನ್ನಡ), ಡಾ. ಬಸವರಾಜ್ ಕೇಲಗಾರ (ಹಾವೇರಿ), ಮಾಳವಿಕಾ ಅವಿನಾಶ್ (ಬೆಂಗಳೂರು) ಹಾಗೂ ಎಂ. ರಾಜೇಂದ್ರ (ಮೈಸೂರು) ಅವರನ್ನು ನೇಮಿಸಲಾಗಿದೆ.

ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು : ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕುಡಚಿಯ ಪಿ ರಾಜೀವ್, ಬೆಂಗಳೂರಿನ ನಂದೀಶ್ ರೆಡ್ಡಿ, ಹಾಸನ ಪ್ರೀತಮ್ ಗೌಡ ನೇಮಕಗೊಂಡಿದ್ದಾರೆ.

1೦ ಮಂದಿ ರಾಜ್ಯ ಕಾರ್ಯದರ್ಶಿಗಳು: ಬೀದರ್‌ನ ಶೈಲೇಂದ್ರ ಬೆಲ್ದಾಳೆ, ಶಿವಮೊಗ್ಗ ಡಿ.ಎಸ್ ಅರುಣ್, ಕಲಬುರಗಿಯ ಬಸವರಾಜ್ ಮತ್ತಿಮೋಡ್, ಚಿಕ್ಕಬಳ್ಳಾಪುರದ ಸಿ ಮುನಿರಾಜು, ತುಮಕೂರಿನ ವಿನಯ್ ಬಿದರೆ, ಮಂಗಳೂರಿನ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೊಪ್ಪಳದ ಶರಣು ತಳ್ಳಕೇರಿ, ಯಾದಗಿರಿಯ ಲಲಿತಾ ಅನಾಪುರ, ಮಂಡ್ಯದ ಲಕ್ಷ್ಮೀ ಅಶ್ವಿನ್ ಗೌಡ, ತುಮಕೂರಿನ ಅಂಬಿಕಾ ಹುಲಿನಾಯ್ಕರ್ ನೇಮಕ.

ಬಿಜೆಪಿ ರಾಜ್ಯ ಖಚಾಂಚಿಯಾಗಿ ಬೆಂಗಳೂರಿನ ಸುಬ್ಬ ನರಸಿಂಹ ಅವರನ್ನು ಮುಂದುವರಿಸಲಾಗಿದೆ.

ವಿವಿಧ ಮೋರ್ಚಾಗಳ ರಾಜ್ಯಾಧ್ಯಕ್ಷರು:
ಮಹಿಳಾ ಮೋರ್ಚಾ: ಸಿ ಮಂಜುಳಾ (ಮಾಜಿ ಮಹಿಳಾ ಆಯೋಗ ಅಧ್ಯಕ್ಷೆ)
ಯುವಮೋರ್ಚಾ: ಧೀರಜ್ ಮುನಿರಾಜು (ದೊಡ್ಡಬಳ್ಳಾಪುರ ಶಾಸಕ)
ಎಸ್ಟಿ ಮೋರ್ಚಾ: ಬಂಗಾರು ಹನುಮಂತ್, ಬಳ್ಳಾರಿ
ಎಸ್ಸಿ ಮೋರ್ಚಾ: ಎಸ್ ಮಂಜುನಾಥ್ (ಸಕಲೇಶಪುರ ಶಾಸಕ)
ಓಬಿಸಿ ಮೋರ್ಚಾ: ರಘು ಕೌಟಿಲ್ಯ. ಮೈಸೂರು
ರೈತ ಮೋರ್ಚಾ: ಎ.ಎಸ್ ಪಾಟೀಲ್ ನಡಹಳ್ಳಿ (ಮಾಜಿ ಶಾಸಕ), ವಿಜಯಪುರ
ಅಲ್ಪಸಂಖ್ಯಾತ ಮೋರ್ಚಾ: ಅನಿಲ್‌ ಥಾಮಸ್‌, ಮೈಸೂರು

andolanait

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

2 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

2 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

5 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

5 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

5 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

5 hours ago