BREAKING NEWS

ಜೆಡಿಎಸ್ ಪಟ್ಟಿ ಬಿಡುಗಡೆ, ಹುಣಸೂರಿಗೆ ಹರೀಶ್ ಗೌಡ ಅಭ್ಯರ್ಥಿ

ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಂಧಾನ ಯಶಸ್ವಿಯಾದ ಬೆನ್ನಿಗೇ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ಹಿರಿಗೌಡರ ಜತೆ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಗರದ ಹೊರವಲಯದ ರೆಸಾರ್ಟ್ನಲ್ಲಿನಡೆದ ಸಭೆಯಲ್ಲಿ ಪಾಲ್ಗೊಂಡು ವಾಸ್ತವ್ಯ ಹೂಡಿದ್ದ ಎಚ್.ಡಿ.ದೇವೇಗೌಡರು ಶುಕ್ರವಾರ ಜಿಟಿಡಿ ಅವರೊಂದಿಗೆ ಒಂದೇ ಕಾರಿನಲ್ಲಿ ಪಯಣ ಬೆಳೆಸಿದರು. ಚಾಮುಂಡೇಶ್ವರಿದೇವಿಗೆ ಪೂಜೆ ಸಲ್ಲಿಸಿ ಪಂಚರಥಯಾತ್ರೆ ಯಶಸ್ವಿಯಾಗಲು ಶಕ್ತಿ ಕೊಡುವಂತೆ ಪ್ರಾರ್ಥಿಸಿದರು.

ಮೊದಲ ಪಟ್ಟಿ ಪ್ರಕಟ: ಚಾಮುಂಡೇಶ್ವರಿದೇವಿಗೆ ವಿಶೇಷ ಪೂಜೆ ಸಲ್ಲಿಸಿ ಹೊರ ಬಂದ ಜಿ.ಟಿ.ದೇವೇಗೌಡರು ದೊಡ್ಡಗೌಡರ ಸಮ್ಮುಖದಲ್ಲೇ ಮೈಸೂರು ಜಿಲ್ಲೆಯ ಆರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದರು. ಚಾಮುಂಡೇಶ್ವರಿಗೆ ಜಿಟಿಡಿ, ಹುಣಸೂರಿಗೆ ಜಿ.ಡಿ.ಹರೀಶ್ಗೌಡ, ಕೆ.ಆರ್.ನಗರಕ್ಕೆ ಸಾ.ರಾ.ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ತಿ.ನರಸೀಪುರಕ್ಕೆ ಎಂ.ಅಶ್ವಿನ್ ಕುಮಾರ್,ಎಚ್.ಡಿ.ಕೋಟೆಗೆ ಮಾಜಿ ಶಾಸಕ ಚಿಕ್ಕಣ್ಣ ಪುತ್ರ ಜಯಪ್ರಕಾಶ್ ಹೆಸರು ಅಂತಿಮವಾಗಿದೆ ಎಂದು ಹೇಳಿದರು. ನಾನು ನಿನ್ನೆಯಿಂದಲೇ ಪಕ್ಷ ಸಂಘಟನೆಯಿಂದಲೇ ತೊಡಗಿದ್ದೇನೆ. ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು ಮತ್ತು ನನ್ನ ಮನೆಯವರು ಹೆಚ್ಚು ಖುಷಿಯಲ್ಲಿದ್ದೇವೆ. ಇನ್ನೂ ಯಾವ ಗೊಂದಲಗಳು ಉಳಿದಿಲ್ಲ ಎಂದರು. ಚಾಮುಂಡೇಶ್ವರಿಗೆ ಎಚ್.ಡಿ.ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನೊಂದು ತಿಂಗಳಿನಲ್ಲಿ ನಡೆಯುವ ಶಕ್ತಿಕೊಡು ಅಂತ ಪ್ರಾರ್ಥಿಸಿದ್ದಾರೆ. ಜನವರಿ ತಿಂಗಳಲ್ಲಿ ಎಚ್.ಡಿ.ದೇವೇಗೌಡರು ಚಂಡಿಕಾ ಹೋಮ ನಡೆಸಲಿರುವ ಹಿನ್ನಲೆಯಲ್ಲಿ ನವದುರ್ಗೆಯನ್ನು ಬೇಡಿಕೊಂಡಿದ್ದಾರೆ ಎಂದರು. ಎಚ್.ಡಿ.ದೇವೇಗೌಡರ ಉತ್ಸಾಹ ನೋಡಿ ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆ ಮತ್ತು ಶಕ್ತಿಯಾಗಿದ್ದಾರೆ. ಅವರನ್ನು ಸಂತೋಷವಾಗಿಡುವುದು ಮತ್ತು ಅವರ ಕನಸನ್ನು ನನಸು ಮಾಡುವುದೇ ಗುರಿಯಾಗಿದೆ ಎಂದು ಹೇಳಿದರು.

ಜಿಟಿಡಿ ಕುರಿತು ಅಪಸ್ವರದ ಮಾತಿಗೆ ಅಸ್ಪದವಿಲ್ಲ: ಎಚ್ ಡಿ ಡಿ

ಮೈಸೂರು ಜಿಲ್ಲೆಗೆ ಜಿ.ಟಿ.ದೇವೇಗೌಡರೇ ನಾಯಕರು. ಅವರ ನಾಯಕತ್ವದಲ್ಲೇ ಮುಂದೆ ಪಕ್ಷದ ಎಲ್ಲ ಕಾರ್ಯಗಳು ನಡೆಯುತ್ತವೆ. ನಾಯಕತ್ವದ ಬಗ್ಗೆ ಒಂದೇ ಒಂದು ಅಪಸ್ವರದ ಮಾತು ಕೇಳಿಬಂದರೂ ನಾನು ಸಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ ನೀಡಿದರು. ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಟಿಡಿ ಜಿಲ್ಲೆಗೆ ಬಲಿಷ್ಠ ನಾಯಕ. ಅವರ ಕುರಿತು ಅಪಸ್ವರ ಎತ್ತುವವರು ಹೊರಗೆ ಹೋಗಬಹುದು. ಜಿಲ್ಲೆಯ ಉಸ್ತುವಾರಿವನ್ನು ಕೊಟ್ಟಿದ್ದೇವೆ. ಅವರ ತೀರ್ಮಾನವೇ ಅಂತಿಮ. ಏನಾದರೂ ಕೊಂಕು ಮಾತನಾಡಿದರೆ ನಾನು ಸಹಿಸುವುದಿಲ್ಲ ಎಂದು ಜಿಟಿಡಿ ವಿರೋಧಿಗಳಿಗೆ ಸಂದೇಶ ರವಾನಿಸಿದರು.

andolana

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

5 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

6 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

6 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

6 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

10 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

10 hours ago