BREAKING NEWS

ಜೆಡಿಎಸ್ ಪಟ್ಟಿ ಬಿಡುಗಡೆ, ಹುಣಸೂರಿಗೆ ಹರೀಶ್ ಗೌಡ ಅಭ್ಯರ್ಥಿ

ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಂಧಾನ ಯಶಸ್ವಿಯಾದ ಬೆನ್ನಿಗೇ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ಹಿರಿಗೌಡರ ಜತೆ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಗರದ ಹೊರವಲಯದ ರೆಸಾರ್ಟ್ನಲ್ಲಿನಡೆದ ಸಭೆಯಲ್ಲಿ ಪಾಲ್ಗೊಂಡು ವಾಸ್ತವ್ಯ ಹೂಡಿದ್ದ ಎಚ್.ಡಿ.ದೇವೇಗೌಡರು ಶುಕ್ರವಾರ ಜಿಟಿಡಿ ಅವರೊಂದಿಗೆ ಒಂದೇ ಕಾರಿನಲ್ಲಿ ಪಯಣ ಬೆಳೆಸಿದರು. ಚಾಮುಂಡೇಶ್ವರಿದೇವಿಗೆ ಪೂಜೆ ಸಲ್ಲಿಸಿ ಪಂಚರಥಯಾತ್ರೆ ಯಶಸ್ವಿಯಾಗಲು ಶಕ್ತಿ ಕೊಡುವಂತೆ ಪ್ರಾರ್ಥಿಸಿದರು.

ಮೊದಲ ಪಟ್ಟಿ ಪ್ರಕಟ: ಚಾಮುಂಡೇಶ್ವರಿದೇವಿಗೆ ವಿಶೇಷ ಪೂಜೆ ಸಲ್ಲಿಸಿ ಹೊರ ಬಂದ ಜಿ.ಟಿ.ದೇವೇಗೌಡರು ದೊಡ್ಡಗೌಡರ ಸಮ್ಮುಖದಲ್ಲೇ ಮೈಸೂರು ಜಿಲ್ಲೆಯ ಆರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದರು. ಚಾಮುಂಡೇಶ್ವರಿಗೆ ಜಿಟಿಡಿ, ಹುಣಸೂರಿಗೆ ಜಿ.ಡಿ.ಹರೀಶ್ಗೌಡ, ಕೆ.ಆರ್.ನಗರಕ್ಕೆ ಸಾ.ರಾ.ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ತಿ.ನರಸೀಪುರಕ್ಕೆ ಎಂ.ಅಶ್ವಿನ್ ಕುಮಾರ್,ಎಚ್.ಡಿ.ಕೋಟೆಗೆ ಮಾಜಿ ಶಾಸಕ ಚಿಕ್ಕಣ್ಣ ಪುತ್ರ ಜಯಪ್ರಕಾಶ್ ಹೆಸರು ಅಂತಿಮವಾಗಿದೆ ಎಂದು ಹೇಳಿದರು. ನಾನು ನಿನ್ನೆಯಿಂದಲೇ ಪಕ್ಷ ಸಂಘಟನೆಯಿಂದಲೇ ತೊಡಗಿದ್ದೇನೆ. ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು ಮತ್ತು ನನ್ನ ಮನೆಯವರು ಹೆಚ್ಚು ಖುಷಿಯಲ್ಲಿದ್ದೇವೆ. ಇನ್ನೂ ಯಾವ ಗೊಂದಲಗಳು ಉಳಿದಿಲ್ಲ ಎಂದರು. ಚಾಮುಂಡೇಶ್ವರಿಗೆ ಎಚ್.ಡಿ.ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನೊಂದು ತಿಂಗಳಿನಲ್ಲಿ ನಡೆಯುವ ಶಕ್ತಿಕೊಡು ಅಂತ ಪ್ರಾರ್ಥಿಸಿದ್ದಾರೆ. ಜನವರಿ ತಿಂಗಳಲ್ಲಿ ಎಚ್.ಡಿ.ದೇವೇಗೌಡರು ಚಂಡಿಕಾ ಹೋಮ ನಡೆಸಲಿರುವ ಹಿನ್ನಲೆಯಲ್ಲಿ ನವದುರ್ಗೆಯನ್ನು ಬೇಡಿಕೊಂಡಿದ್ದಾರೆ ಎಂದರು. ಎಚ್.ಡಿ.ದೇವೇಗೌಡರ ಉತ್ಸಾಹ ನೋಡಿ ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆ ಮತ್ತು ಶಕ್ತಿಯಾಗಿದ್ದಾರೆ. ಅವರನ್ನು ಸಂತೋಷವಾಗಿಡುವುದು ಮತ್ತು ಅವರ ಕನಸನ್ನು ನನಸು ಮಾಡುವುದೇ ಗುರಿಯಾಗಿದೆ ಎಂದು ಹೇಳಿದರು.

ಜಿಟಿಡಿ ಕುರಿತು ಅಪಸ್ವರದ ಮಾತಿಗೆ ಅಸ್ಪದವಿಲ್ಲ: ಎಚ್ ಡಿ ಡಿ

ಮೈಸೂರು ಜಿಲ್ಲೆಗೆ ಜಿ.ಟಿ.ದೇವೇಗೌಡರೇ ನಾಯಕರು. ಅವರ ನಾಯಕತ್ವದಲ್ಲೇ ಮುಂದೆ ಪಕ್ಷದ ಎಲ್ಲ ಕಾರ್ಯಗಳು ನಡೆಯುತ್ತವೆ. ನಾಯಕತ್ವದ ಬಗ್ಗೆ ಒಂದೇ ಒಂದು ಅಪಸ್ವರದ ಮಾತು ಕೇಳಿಬಂದರೂ ನಾನು ಸಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ ನೀಡಿದರು. ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಟಿಡಿ ಜಿಲ್ಲೆಗೆ ಬಲಿಷ್ಠ ನಾಯಕ. ಅವರ ಕುರಿತು ಅಪಸ್ವರ ಎತ್ತುವವರು ಹೊರಗೆ ಹೋಗಬಹುದು. ಜಿಲ್ಲೆಯ ಉಸ್ತುವಾರಿವನ್ನು ಕೊಟ್ಟಿದ್ದೇವೆ. ಅವರ ತೀರ್ಮಾನವೇ ಅಂತಿಮ. ಏನಾದರೂ ಕೊಂಕು ಮಾತನಾಡಿದರೆ ನಾನು ಸಹಿಸುವುದಿಲ್ಲ ಎಂದು ಜಿಟಿಡಿ ವಿರೋಧಿಗಳಿಗೆ ಸಂದೇಶ ರವಾನಿಸಿದರು.

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

17 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

17 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

17 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

17 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

17 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

17 hours ago