BREAKING NEWS

ಕರ್ನಾಟಕಕ್ಕೆ ಹರಿದು ಬರುತ್ತಿದೆ ಲೀಟರ್‌ಗಟ್ಟಲೆ ಗೋವಾ ಮದ್ಯ- ಚೆಕ್‌ಪೋಸ್ಟ್‌ಗಳಲ್ಲಿ ಭಾರಿ ಟೈಟ್‌

ಕಾರವಾರ: ಕರ್ನಾಟಕದಲ್ಲಿ ಚುನಾವಣೆ ಘೋಷಣೆ ಆದಾಗಲೆಲ್ಲ ಮದ್ಯ ವ್ಯವಹಾರ ಚುರುಕಾಗುವ ಪಕ್ಕದ ಗೋವಾ ರಾಜ್ಯದಲ್ಲಿ, ಈ ಬಾರಿಯೂ ಕರ್ನಾಟಕ ವಿಧಾನಸಭೆ ಚುನಾವಣೆಯಿಂದ ಮದ್ಯ ವ್ಯವಹಾರ ಜೋರಾಗಿದೆ.

ಗೋವಾ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಮಾಜಾಳಿ, ಅನಮೋಡ, ಕಣಕುಂಬಿ ಚೆಕ್‌ಪೋಸ್ಟ್‌ ಮೂಲಕ ಮದ್ಯ ಸಾಗಾಟ ಪ್ರಯತ್ನ ನಡೆಯುತ್ತಲೇ ಇದೆ.ರಾಜ್ಯದ ವಿವಿಧ ಜಿಲ್ಲೆಗಳಿಗೆ ಉತ್ತರ ಕನ್ನಡದ ಮೂಲಕವೂ ಗೋವಾ ಮದ್ಯ ಅಕ್ರಮವಾಗಿ ಸಾಗಾಟ ನಡೆಯುತ್ತದೆ. ಇದರಿಂದ ಎರಡು ತಿಂಗಳ ಅವಧಿಯಲ್ಲಿ ಗಡಿ ಜಿಲ್ಲೆಗಳಲ್ಲಿ ಮದ್ಯ ತುಂಬಿದ ಲಾರಿಗಳು ಪದೇ ಪದೆ ಅಬಕಾರಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದೆ.

ಸದ್ಯ ಮಾಜಾಳಿ ಚೆಕ್‌ಪೋಸ್ಟ್‌ನಿಂದ ನಿತ್ಯ ಪರವಾನಗಿ ಹೊಂದಿದ 3-4 ಲಾರಿಗಳು ಸಾಗುತ್ತವೆ. ಅದರಲ್ಲಿ ಕೆಲ ಲಾರಿಗಳಲ್ಲಿ700 ಬಾಕ್ಸ್‌ ಮದ್ಯ ಇದ್ದರೆ, ಇನ್ನು ಕೆಲವು 1200 ಬಾಕ್ಸ್‌ ಮದ್ಯ ಸಾಗಣೆಯಾಗುತ್ತದೆ. ಇವುಗಳ ಜತೆಯಲ್ಲಿಯೇ ಆಗಾಗ ಪರವಾನಿಗೆ ಇಲ್ಲದ ಲಾರಿ, ಪ್ರವಾಸಿ ವಾಹನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವಾ ಮದ್ಯ ಗಡಿ ದಾಟುತ್ತಿವೆ.

ಅಸಲಿಗೆ ಅಕ್ರಮವಾಗಿ ಮದ್ಯ ಸಾಗಿಸುವ ಅಂತಾರಾಜ್ಯ ಜಾಲವೊಂದು ಅನೇಕ ವರ್ಷಗಳಿಂದ ಸಕ್ರಿಯವಾಗಿದೆ. ಮಹಾರಾಷ್ಟ್ರ, ಗುಜರಾತ್‌ ಸೇರಿ ಅನೇಕ ರಾಜ್ಯಗಳಿಗೆ ಆ ಜಾಲದ ಮೂಲಕ ಮದ್ಯ ಪೂರೈಕೆ ಆಗುತ್ತವೆ. ಮಹಾರಾಷ್ಟ್ರ ಗಡಿ, ಬೆಳಗಾವಿ ಗಡಿ, ಉತ್ತರ ಕನ್ನಡ ಗಡಿಯನ್ನು ಈ ಜಾಲವು ಪರ್ಯಯವಾಗಿ ಬಳಸಿಕೊಳ್ಳುತ್ತಾ ಆಗಾಗ ಸಿಕ್ಕಿ ಬೀಳುತ್ತದೆ.

ಮೀನುಗಾರರ ನೆರವು : ಈಗ ಚುನಾವಣೆ ಕಾರಣ ಕರ್ನಾಟಕದಲ್ಲಿ ಅಕ್ರಮ ಮದ್ಯ ಬೇಡಿಕೆ ಹೆಚ್ಚಿದೆ. ಇದರಿಂದ ಗೋವಾದಿಂದ ಮದ್ಯ ಸಾಗಿಸುವ ಯತ್ನಗಳೂ ನಿರಂತವಾಗಿವೆ. ಇನ್ನೊಂದೆಡೆ ಮದ್ಯ ಅಕ್ರಮ ಹಾವಳಿ ತಪ್ಪಿಸುವುದಕ್ಕಾಗಿಯೇ ಪೊಲೀಸ್‌ ಇಲಾಖೆ ಸ್ಥಳೀಯ ಮೀನುಗಾರರ ನೆರವು ಕೋರಿದೆ. ಜಲ ಮಾರ್ಗದ ಮೂಲಕ ಮದ್ಯ ಸಾಗಿಸುವ ಜಾಲ ಕಂಡರೆ ತಿಳಿಸುವಂತೆ ಕೋರಿದೆ.

ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಜಿಲ್ಲೆಯೊಳಗೂ ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ ಎಂದು ಕಾರವಾರ ಅಬಕಾರಿ ಉಪ ಆಯುಕ್ತ ಜಗದೀಶ ಕುಲಕರ್ಣಿ ತಿಳಿಸಿದ್ದಾರೆ

lokesh

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

3 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

14 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

14 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

14 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

14 hours ago