ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು ಸಾಧಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ.
ಇಂದು(ಆಗಸ್ಟ್ 23) ಸಂಜೆ 6ಗಂಟೆ 4 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗುತ್ತಿದ್ದು, ಆ ಕೌತುಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆಲ ಗಂಟೆಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ನೇರ ಪ್ರಸಾರ ಮಾಡುತ್ತಿದೆ. ಇದಕ್ಕಾಗಿ ದೊಡ್ಡ ಎಲ್ಇಡಿ ಸ್ಕ್ರೀನ್ ಹಾಕಲಾಗಿದೆ. ಇನ್ನು ವಿಶೇಷ ಏನೆಂದರೆ ಲ್ಯಾಂಡರ್ ಮಾಹಿತಿಗಳನ್ನು ತಾರಾಲಯದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.
ಚಂದ್ರನ ಅಂಗಳಕ್ಕೆ ಲ್ಯಾಂಡರ್ ಇಳಿಯುವ ಕ್ಷಣವನ್ನು ನೋಡಲು ದೇಶವೇ ಕಾತುರವಾಗಿರುವುದರಿಂದ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು (ಆ.23)ಸಂಜೆ 5 ಗಂಟೆಯಿಂದ ಸಾಪ್ಟ್ ಲ್ಯಾಂಡಿಂಗ್ ನೇರ ಪ್ರಸಾರ ವೀಕ್ಷಿಸಲು ಈ ಅವಕಾಶ ಕಲ್ಪಿಸಲಾಗಿದೆ. ತಾರಾಲಯದ ಹೊರಗಡೆ ಆರು ದೊಡ್ಡ ಎಲ್ ಇಡಿ ಸ್ಕ್ರೀನ್ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೆಹರು ತಾರಾಲಯದ ಹೊರಭಾಗದಲ್ಲಿ ಸುಮಾರು 500 ಜನರು ನೇರ ಪ್ರಸಾರ ವೀಕ್ಷಿಸಲು ಅನುವುಮಾಡಿಕೊಡಲಾಗಿದೆ.
ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ
ಇನ್ನು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು, ಲ್ಯಾಂಡರ್ ಮಾಹಿತಿಗಳನ್ನು ತಾರಾಲಯ ದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.
ಒಟ್ಟಿನಲ್ಲಿ ಲ್ಯಾಂಡಿಂಗ್ನ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಜನರು ಕಾತುರತೆಯಿಂದ ಕಾಯುತ್ತಿದ್ದು, ಈ ಕ್ಷಣವನ್ನು ನೇರ ಪ್ರಸಾರದಲ್ಲಿ ನೋಡಲು ಅವಕಾಶವಿರುವುದರಿಂದ ಎಲ್ಲರ ಚಿತ್ತ ವಿಕ್ರಮ್ ಲ್ಯಾಂಡರ್ ನತ್ತ ನೆಟ್ಟಿದೆ. ಬೆಂಗಳೂರಿನಲ್ಲಿ ಇದ್ದವರು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…