BREAKING NEWS

ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ

ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು ಸಾಧಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ.

ಇಂದು(ಆಗಸ್ಟ್ 23) ಸಂಜೆ 6ಗಂಟೆ 4 ನಿಮಿಷಕ್ಕೆ ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಲ್ಯಾಂಡ್​ ಆಗುತ್ತಿದ್ದು, ಆ ಕೌತುಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆಲ ಗಂಟೆಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3 ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ನೇರ ಪ್ರಸಾರ ಮಾಡುತ್ತಿದೆ. ಇದಕ್ಕಾಗಿ ದೊಡ್ಡ ಎಲ್​ಇಡಿ ಸ್ಕ್ರೀನ್​ ಹಾಕಲಾಗಿದೆ. ಇನ್ನು ವಿಶೇಷ ಏನೆಂದರೆ ಲ್ಯಾಂಡರ್ ಮಾಹಿತಿಗಳನ್ನು ತಾರಾಲಯದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.

ಚಂದ್ರನ ಅಂಗಳಕ್ಕೆ ಲ್ಯಾಂಡರ್ ಇಳಿಯುವ ಕ್ಷಣವನ್ನು ನೋಡಲು ದೇಶವೇ ಕಾತುರವಾಗಿರುವುದರಿಂದ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು (ಆ.23)ಸಂಜೆ 5 ಗಂಟೆಯಿಂದ ಸಾಪ್ಟ್ ಲ್ಯಾಂಡಿಂಗ್ ನೇರ ಪ್ರಸಾರ ವೀಕ್ಷಿಸಲು ಈ ಅವಕಾಶ ಕಲ್ಪಿಸಲಾಗಿದೆ. ತಾರಾಲಯದ ಹೊರಗಡೆ ಆರು ದೊಡ್ಡ ಎಲ್ ಇಡಿ ಸ್ಕ್ರೀನ್ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೆಹರು ತಾರಾಲಯದ ಹೊರಭಾಗದಲ್ಲಿ ಸುಮಾರು 500 ಜನರು ನೇರ ಪ್ರಸಾರ ವೀಕ್ಷಿಸಲು ಅನುವುಮಾಡಿಕೊಡಲಾಗಿದೆ.

ವಿಕ್ರಮ್​ ಲ್ಯಾಂಡರ್ ಲ್ಯಾಂಡಿಂಗ್​ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ

ಇನ್ನು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು, ಲ್ಯಾಂಡರ್ ಮಾಹಿತಿಗಳನ್ನು ತಾರಾಲಯ ದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.

ಒಟ್ಟಿನಲ್ಲಿ ಲ್ಯಾಂಡಿಂಗ್​ನ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಜನರು ಕಾತುರತೆಯಿಂದ ಕಾಯುತ್ತಿದ್ದು, ಈ ಕ್ಷಣವನ್ನು ನೇರ ಪ್ರಸಾರದಲ್ಲಿ ನೋಡಲು ಅವಕಾಶವಿರುವುದರಿಂದ ಎಲ್ಲರ ಚಿತ್ತ ವಿಕ್ರಮ್ ಲ್ಯಾಂಡರ್​ ನತ್ತ ನೆಟ್ಟಿದೆ. ಬೆಂಗಳೂರಿನಲ್ಲಿ ಇದ್ದವರು ಈ ಅವಕಾಶವನ್ನು ಮಿಸ್​ ಮಾಡಿಕೊಳ್ಳಬೇಡಿ.

andolanait

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

2 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

3 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

3 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

3 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago