BREAKING NEWS

ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ

ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು ಸಾಧಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ.

ಇಂದು(ಆಗಸ್ಟ್ 23) ಸಂಜೆ 6ಗಂಟೆ 4 ನಿಮಿಷಕ್ಕೆ ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಲ್ಯಾಂಡ್​ ಆಗುತ್ತಿದ್ದು, ಆ ಕೌತುಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆಲ ಗಂಟೆಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3 ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ನೇರ ಪ್ರಸಾರ ಮಾಡುತ್ತಿದೆ. ಇದಕ್ಕಾಗಿ ದೊಡ್ಡ ಎಲ್​ಇಡಿ ಸ್ಕ್ರೀನ್​ ಹಾಕಲಾಗಿದೆ. ಇನ್ನು ವಿಶೇಷ ಏನೆಂದರೆ ಲ್ಯಾಂಡರ್ ಮಾಹಿತಿಗಳನ್ನು ತಾರಾಲಯದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.

ಚಂದ್ರನ ಅಂಗಳಕ್ಕೆ ಲ್ಯಾಂಡರ್ ಇಳಿಯುವ ಕ್ಷಣವನ್ನು ನೋಡಲು ದೇಶವೇ ಕಾತುರವಾಗಿರುವುದರಿಂದ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು (ಆ.23)ಸಂಜೆ 5 ಗಂಟೆಯಿಂದ ಸಾಪ್ಟ್ ಲ್ಯಾಂಡಿಂಗ್ ನೇರ ಪ್ರಸಾರ ವೀಕ್ಷಿಸಲು ಈ ಅವಕಾಶ ಕಲ್ಪಿಸಲಾಗಿದೆ. ತಾರಾಲಯದ ಹೊರಗಡೆ ಆರು ದೊಡ್ಡ ಎಲ್ ಇಡಿ ಸ್ಕ್ರೀನ್ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೆಹರು ತಾರಾಲಯದ ಹೊರಭಾಗದಲ್ಲಿ ಸುಮಾರು 500 ಜನರು ನೇರ ಪ್ರಸಾರ ವೀಕ್ಷಿಸಲು ಅನುವುಮಾಡಿಕೊಡಲಾಗಿದೆ.

ವಿಕ್ರಮ್​ ಲ್ಯಾಂಡರ್ ಲ್ಯಾಂಡಿಂಗ್​ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ

ಇನ್ನು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು, ಲ್ಯಾಂಡರ್ ಮಾಹಿತಿಗಳನ್ನು ತಾರಾಲಯ ದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.

ಒಟ್ಟಿನಲ್ಲಿ ಲ್ಯಾಂಡಿಂಗ್​ನ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಜನರು ಕಾತುರತೆಯಿಂದ ಕಾಯುತ್ತಿದ್ದು, ಈ ಕ್ಷಣವನ್ನು ನೇರ ಪ್ರಸಾರದಲ್ಲಿ ನೋಡಲು ಅವಕಾಶವಿರುವುದರಿಂದ ಎಲ್ಲರ ಚಿತ್ತ ವಿಕ್ರಮ್ ಲ್ಯಾಂಡರ್​ ನತ್ತ ನೆಟ್ಟಿದೆ. ಬೆಂಗಳೂರಿನಲ್ಲಿ ಇದ್ದವರು ಈ ಅವಕಾಶವನ್ನು ಮಿಸ್​ ಮಾಡಿಕೊಳ್ಳಬೇಡಿ.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

11 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

12 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

14 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

14 hours ago