ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು ಸಾಧಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ.
ಇಂದು(ಆಗಸ್ಟ್ 23) ಸಂಜೆ 6ಗಂಟೆ 4 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗುತ್ತಿದ್ದು, ಆ ಕೌತುಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆಲ ಗಂಟೆಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ನೇರ ಪ್ರಸಾರ ಮಾಡುತ್ತಿದೆ. ಇದಕ್ಕಾಗಿ ದೊಡ್ಡ ಎಲ್ಇಡಿ ಸ್ಕ್ರೀನ್ ಹಾಕಲಾಗಿದೆ. ಇನ್ನು ವಿಶೇಷ ಏನೆಂದರೆ ಲ್ಯಾಂಡರ್ ಮಾಹಿತಿಗಳನ್ನು ತಾರಾಲಯದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.
ಚಂದ್ರನ ಅಂಗಳಕ್ಕೆ ಲ್ಯಾಂಡರ್ ಇಳಿಯುವ ಕ್ಷಣವನ್ನು ನೋಡಲು ದೇಶವೇ ಕಾತುರವಾಗಿರುವುದರಿಂದ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು (ಆ.23)ಸಂಜೆ 5 ಗಂಟೆಯಿಂದ ಸಾಪ್ಟ್ ಲ್ಯಾಂಡಿಂಗ್ ನೇರ ಪ್ರಸಾರ ವೀಕ್ಷಿಸಲು ಈ ಅವಕಾಶ ಕಲ್ಪಿಸಲಾಗಿದೆ. ತಾರಾಲಯದ ಹೊರಗಡೆ ಆರು ದೊಡ್ಡ ಎಲ್ ಇಡಿ ಸ್ಕ್ರೀನ್ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೆಹರು ತಾರಾಲಯದ ಹೊರಭಾಗದಲ್ಲಿ ಸುಮಾರು 500 ಜನರು ನೇರ ಪ್ರಸಾರ ವೀಕ್ಷಿಸಲು ಅನುವುಮಾಡಿಕೊಡಲಾಗಿದೆ.
ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ
ಇನ್ನು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು, ಲ್ಯಾಂಡರ್ ಮಾಹಿತಿಗಳನ್ನು ತಾರಾಲಯ ದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.
ಒಟ್ಟಿನಲ್ಲಿ ಲ್ಯಾಂಡಿಂಗ್ನ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಜನರು ಕಾತುರತೆಯಿಂದ ಕಾಯುತ್ತಿದ್ದು, ಈ ಕ್ಷಣವನ್ನು ನೇರ ಪ್ರಸಾರದಲ್ಲಿ ನೋಡಲು ಅವಕಾಶವಿರುವುದರಿಂದ ಎಲ್ಲರ ಚಿತ್ತ ವಿಕ್ರಮ್ ಲ್ಯಾಂಡರ್ ನತ್ತ ನೆಟ್ಟಿದೆ. ಬೆಂಗಳೂರಿನಲ್ಲಿ ಇದ್ದವರು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…