ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು ಸಾಧಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ.
ಇಂದು(ಆಗಸ್ಟ್ 23) ಸಂಜೆ 6ಗಂಟೆ 4 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗುತ್ತಿದ್ದು, ಆ ಕೌತುಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆಲ ಗಂಟೆಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ನೇರ ಪ್ರಸಾರ ಮಾಡುತ್ತಿದೆ. ಇದಕ್ಕಾಗಿ ದೊಡ್ಡ ಎಲ್ಇಡಿ ಸ್ಕ್ರೀನ್ ಹಾಕಲಾಗಿದೆ. ಇನ್ನು ವಿಶೇಷ ಏನೆಂದರೆ ಲ್ಯಾಂಡರ್ ಮಾಹಿತಿಗಳನ್ನು ತಾರಾಲಯದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.
ಚಂದ್ರನ ಅಂಗಳಕ್ಕೆ ಲ್ಯಾಂಡರ್ ಇಳಿಯುವ ಕ್ಷಣವನ್ನು ನೋಡಲು ದೇಶವೇ ಕಾತುರವಾಗಿರುವುದರಿಂದ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು (ಆ.23)ಸಂಜೆ 5 ಗಂಟೆಯಿಂದ ಸಾಪ್ಟ್ ಲ್ಯಾಂಡಿಂಗ್ ನೇರ ಪ್ರಸಾರ ವೀಕ್ಷಿಸಲು ಈ ಅವಕಾಶ ಕಲ್ಪಿಸಲಾಗಿದೆ. ತಾರಾಲಯದ ಹೊರಗಡೆ ಆರು ದೊಡ್ಡ ಎಲ್ ಇಡಿ ಸ್ಕ್ರೀನ್ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೆಹರು ತಾರಾಲಯದ ಹೊರಭಾಗದಲ್ಲಿ ಸುಮಾರು 500 ಜನರು ನೇರ ಪ್ರಸಾರ ವೀಕ್ಷಿಸಲು ಅನುವುಮಾಡಿಕೊಡಲಾಗಿದೆ.
ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ
ಇನ್ನು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು, ಲ್ಯಾಂಡರ್ ಮಾಹಿತಿಗಳನ್ನು ತಾರಾಲಯ ದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.
ಒಟ್ಟಿನಲ್ಲಿ ಲ್ಯಾಂಡಿಂಗ್ನ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಜನರು ಕಾತುರತೆಯಿಂದ ಕಾಯುತ್ತಿದ್ದು, ಈ ಕ್ಷಣವನ್ನು ನೇರ ಪ್ರಸಾರದಲ್ಲಿ ನೋಡಲು ಅವಕಾಶವಿರುವುದರಿಂದ ಎಲ್ಲರ ಚಿತ್ತ ವಿಕ್ರಮ್ ಲ್ಯಾಂಡರ್ ನತ್ತ ನೆಟ್ಟಿದೆ. ಬೆಂಗಳೂರಿನಲ್ಲಿ ಇದ್ದವರು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…