BREAKING NEWS

ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ

ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು ಸಾಧಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ.

ಇಂದು(ಆಗಸ್ಟ್ 23) ಸಂಜೆ 6ಗಂಟೆ 4 ನಿಮಿಷಕ್ಕೆ ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಲ್ಯಾಂಡ್​ ಆಗುತ್ತಿದ್ದು, ಆ ಕೌತುಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆಲ ಗಂಟೆಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3 ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ನೇರ ಪ್ರಸಾರ ಮಾಡುತ್ತಿದೆ. ಇದಕ್ಕಾಗಿ ದೊಡ್ಡ ಎಲ್​ಇಡಿ ಸ್ಕ್ರೀನ್​ ಹಾಕಲಾಗಿದೆ. ಇನ್ನು ವಿಶೇಷ ಏನೆಂದರೆ ಲ್ಯಾಂಡರ್ ಮಾಹಿತಿಗಳನ್ನು ತಾರಾಲಯದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.

ಚಂದ್ರನ ಅಂಗಳಕ್ಕೆ ಲ್ಯಾಂಡರ್ ಇಳಿಯುವ ಕ್ಷಣವನ್ನು ನೋಡಲು ದೇಶವೇ ಕಾತುರವಾಗಿರುವುದರಿಂದ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು (ಆ.23)ಸಂಜೆ 5 ಗಂಟೆಯಿಂದ ಸಾಪ್ಟ್ ಲ್ಯಾಂಡಿಂಗ್ ನೇರ ಪ್ರಸಾರ ವೀಕ್ಷಿಸಲು ಈ ಅವಕಾಶ ಕಲ್ಪಿಸಲಾಗಿದೆ. ತಾರಾಲಯದ ಹೊರಗಡೆ ಆರು ದೊಡ್ಡ ಎಲ್ ಇಡಿ ಸ್ಕ್ರೀನ್ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೆಹರು ತಾರಾಲಯದ ಹೊರಭಾಗದಲ್ಲಿ ಸುಮಾರು 500 ಜನರು ನೇರ ಪ್ರಸಾರ ವೀಕ್ಷಿಸಲು ಅನುವುಮಾಡಿಕೊಡಲಾಗಿದೆ.

ವಿಕ್ರಮ್​ ಲ್ಯಾಂಡರ್ ಲ್ಯಾಂಡಿಂಗ್​ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ

ಇನ್ನು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು, ಲ್ಯಾಂಡರ್ ಮಾಹಿತಿಗಳನ್ನು ತಾರಾಲಯ ದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.

ಒಟ್ಟಿನಲ್ಲಿ ಲ್ಯಾಂಡಿಂಗ್​ನ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಜನರು ಕಾತುರತೆಯಿಂದ ಕಾಯುತ್ತಿದ್ದು, ಈ ಕ್ಷಣವನ್ನು ನೇರ ಪ್ರಸಾರದಲ್ಲಿ ನೋಡಲು ಅವಕಾಶವಿರುವುದರಿಂದ ಎಲ್ಲರ ಚಿತ್ತ ವಿಕ್ರಮ್ ಲ್ಯಾಂಡರ್​ ನತ್ತ ನೆಟ್ಟಿದೆ. ಬೆಂಗಳೂರಿನಲ್ಲಿ ಇದ್ದವರು ಈ ಅವಕಾಶವನ್ನು ಮಿಸ್​ ಮಾಡಿಕೊಳ್ಳಬೇಡಿ.

andolanait

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

3 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

3 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

4 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

4 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

4 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

7 hours ago