ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು ಸಾಧಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ.
ಇಂದು(ಆಗಸ್ಟ್ 23) ಸಂಜೆ 6ಗಂಟೆ 4 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗುತ್ತಿದ್ದು, ಆ ಕೌತುಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆಲ ಗಂಟೆಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ನೇರ ಪ್ರಸಾರ ಮಾಡುತ್ತಿದೆ. ಇದಕ್ಕಾಗಿ ದೊಡ್ಡ ಎಲ್ಇಡಿ ಸ್ಕ್ರೀನ್ ಹಾಕಲಾಗಿದೆ. ಇನ್ನು ವಿಶೇಷ ಏನೆಂದರೆ ಲ್ಯಾಂಡರ್ ಮಾಹಿತಿಗಳನ್ನು ತಾರಾಲಯದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.
ಚಂದ್ರನ ಅಂಗಳಕ್ಕೆ ಲ್ಯಾಂಡರ್ ಇಳಿಯುವ ಕ್ಷಣವನ್ನು ನೋಡಲು ದೇಶವೇ ಕಾತುರವಾಗಿರುವುದರಿಂದ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು (ಆ.23)ಸಂಜೆ 5 ಗಂಟೆಯಿಂದ ಸಾಪ್ಟ್ ಲ್ಯಾಂಡಿಂಗ್ ನೇರ ಪ್ರಸಾರ ವೀಕ್ಷಿಸಲು ಈ ಅವಕಾಶ ಕಲ್ಪಿಸಲಾಗಿದೆ. ತಾರಾಲಯದ ಹೊರಗಡೆ ಆರು ದೊಡ್ಡ ಎಲ್ ಇಡಿ ಸ್ಕ್ರೀನ್ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೆಹರು ತಾರಾಲಯದ ಹೊರಭಾಗದಲ್ಲಿ ಸುಮಾರು 500 ಜನರು ನೇರ ಪ್ರಸಾರ ವೀಕ್ಷಿಸಲು ಅನುವುಮಾಡಿಕೊಡಲಾಗಿದೆ.
ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ
ಇನ್ನು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು, ಲ್ಯಾಂಡರ್ ಮಾಹಿತಿಗಳನ್ನು ತಾರಾಲಯ ದ ವಿಜ್ಞಾನಿಗಳು ಕನ್ನಡದಲ್ಲಿಯೇ ನೀಡಲಿದ್ದಾರೆ.
ಒಟ್ಟಿನಲ್ಲಿ ಲ್ಯಾಂಡಿಂಗ್ನ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಜನರು ಕಾತುರತೆಯಿಂದ ಕಾಯುತ್ತಿದ್ದು, ಈ ಕ್ಷಣವನ್ನು ನೇರ ಪ್ರಸಾರದಲ್ಲಿ ನೋಡಲು ಅವಕಾಶವಿರುವುದರಿಂದ ಎಲ್ಲರ ಚಿತ್ತ ವಿಕ್ರಮ್ ಲ್ಯಾಂಡರ್ ನತ್ತ ನೆಟ್ಟಿದೆ. ಬೆಂಗಳೂರಿನಲ್ಲಿ ಇದ್ದವರು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…