BREAKING NEWS

ಲಿವ್ ಇನ್ ಸಂಗಾತಿಯ ದೇಹ 12 ತುಂಡುಗಳನ್ನಾಗಿ ಕತ್ತರಿಸಿ, ಕುಕ್ಕರ್‌ನಲ್ಲಿ ಬೇಯಿಸಿದ ಪ್ರೇಮಿ

ಮುಂಬೈ : ಲಿವ್ ಇನ್ ಸಂಗಾತಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಮತ್ತೊಂದು ಎದೆನಡುಗಿಸುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಮುಂಬಯಿ ಸಮೀಪದ ಥಾಣೆಯ ಮೀರಾ ರಸ್ತೆಯಲ್ಲಿನ ಬಾಡಿಗೆ ಮನೆಯಲ್ಲಿ ತನ್ನ ಲಿವ್ ಇನ್ ಸಂಗಾತಿಯನ್ನು ಬರ್ಬರವಾಗಿ ಕೊಂದು, ಆಕೆಯ ದೇಹವನ್ನು ತುಂಡು ತುಂಡು ಕತ್ತರಿಸಿದ ಪ್ರಕರಣದಲ್ಲಿ 56 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಮರ ಕತ್ತರಿಸುವ ಕಟರ್‌ನಿಂದ ಸಂಗಾತಿಯ ದೇಹವನ್ನು ಸುಮಾರು 12 ತುಂಡುಗಳನ್ನಾಗಿ ಕತ್ತರಿಸಿದ ಬಳಿಕ ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಬೇಯಿಸಿದ ಭಯಾನಕ ಸಂಗತಿ ಬೆಳಕಿಗೆ ಬಂದಿದೆ.

36 ವರ್ಷದ ಸರಸ್ವತಿ ವೈದ್ಯ ಎಂಬ ಮಹಿಳೆ ಜತೆ, ಆರೋಪಿ ಮನೋಜ್ ಸಹಾನಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಅಪಾರ್ಟ್‌ಮೆಂಟ್ ಕಟ್ಟಡದ 704ನೇ ಫ್ಲ್ಯಾಟ್‌ನಲ್ಲಿ ನೆಲೆಸಿದ್ದ. ಮನೋಜ್ ಬೊರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದು, ಸರಸ್ವತಿ ಜತೆ ಲಿವ್ ಇನ್ ಸಂಬಂಧದಲ್ಲಿದ್ದ. ಈ ಜೋಡಿ ವಾಸವಿದ್ದ ಫ್ಲ್ಯಾಟ್‌ನಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಅಲ್ಲಿನ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬುಧವಾರ ಸಂಜೆ ನಯಾನಗರ ಪೊಲೀಸ್ ಠಾಣೆಗೆ ಕಟ್ಟಡ ನಿವಾಸಿಗಳು ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಫ್ಲ್ಯಾಟ್ ಒಳಗೆ ಪ್ರವೇಶಿಸಿದಾಗ ಆಘಾತಕಾರಿ ದೃಶ್ಯ ಬೆಳಕಿಗೆ ಬಂದಿದೆ.

ಸಹಾನಿ ಮನೆಯಲ್ಲಿ ದೊರಕಿದ ಕೊಳೆತ ದೇಹದ ಭಾಗಗಳು, ಈ ಕೊಲೆ ಮೂರು – ನಾಲ್ಕು ದಿನ ಹಿಂದೆಯೇ ನಡೆದಿರಬಹುದು ಎಂಬ ಅನುಮಾನಕ್ಕೆ ಎಡೆಮಾಡಿದೆ. ಫ್ಲ್ಯಾಟ್‌ನಲ್ಲಿ ಪೊಲೀಸರ ತಂಡಕ್ಕೆ ಮಹಿಳೆಯ ಕೊಳೆತ ದೇಹ ಪತ್ತೆಯಾಗಿದ್ದು, ಅದನ್ನು ಹಲವು ತುಂಡುಗಳನ್ನಾಗಿ ಕತ್ತರಿಸಲಾಗಿತ್ತು.

“ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಇಬ್ಬರೂ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದು, ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ ವಾಸವಿದ್ದರು. ಯಾವುದೋ ವಿಚಾರಕ್ಕೆ ಅವರಿಬ್ಬರ ಮಧ್ಯೆ ಜಗಳವಾಗಿದ್ದು, ಆಕೆಯನ್ನು ಮನೋಜ್ ಕೊಲೆ ಮಾಡಿದ್ದಾನೆ. ಕಟರ್‌ನಿಂದ ಆಕೆಯ ದೇಹವನ್ನು ಹಲವು ತುಂಡುಗಳನ್ನಾಗಿ ಕತ್ತರಿಸಿದ್ದಾನೆ. ನಾವು ಮನೆಗೆ ತೆರಳಿ, ಬಾಗಿಲು ತೆರೆದಾಗ ಅದು ಕೊಲೆ ಪ್ರಕರಣ ಹಾಗೂ ಶಂಕಿತ ಆರೋಪಿ ಸಾಕ್ಷ್ಯವನ್ನು ಅಡಗಿಸಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಅರ್ಥವಾಗಿತ್ತು” ಎಂದು ಉಪ ಪೊಲೀಸ್ ಆಯುಕ್ತ ಜಯಂತ್ ಬಜಬಾಳೆ ತಿಳಿಸಿದ್ದಾರೆ.

ಈ ಕೊಲೆಗೆ ನೈಜ ಕಾರಣ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸಿದ್ದಾರೆ. ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅವರಲ್ಲಿ ಒಬ್ಬಾತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಫ್ಲ್ಯಾಟ್ ಒಳಗಿದ್ದ ಕೊಳೆತ ದೇಹದ ಭಾಗಗಳನ್ನು ಪೊಲೀಸ್ ಸಿಬ್ಬಂದಿ ಬೆಡ್‌ಶೀಟ್‌ನಲ್ಲಿ ಇರಿಸಿಕೊಂಡು ಹೊರಗೆ ತಂದಿದ್ದಾರೆ.

ಈ ಅಮಾನುಷ ಘಟನೆಯು ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ನೆನಪಿಗೆ ತಂದಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಶ್ರದ್ಧಾ ವಾಕರ್ ಮತ್ತು ಅಫ್ತಾಬ್ ಪೂನಾವಾಲಾ ಇಬ್ಬರೂ ದಿಲ್ಲಿಯಲ್ಲಿ ವಾಸವಿದ್ದರು. ಶ್ರದ್ಧಾಳನ್ನು ಕೊಲೆ ಮಾಡಿದ್ದ ಅಫ್ತಾಬ್, ಬಳಿಕ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ. ಬಳಿಕ ಒಂದೊಂದೇ ಭಾಗವನ್ನು ಕಾಡಿನಲ್ಲಿ ಎಸೆಯುತ್ತಾ ಬಂದಿದ್ದ. ಈ ಘಟನೆ ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು.

lokesh

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago