BREAKING NEWS

ಲಿವ್ ಇನ್ ಸಂಗಾತಿಯ ದೇಹ 12 ತುಂಡುಗಳನ್ನಾಗಿ ಕತ್ತರಿಸಿ, ಕುಕ್ಕರ್‌ನಲ್ಲಿ ಬೇಯಿಸಿದ ಪ್ರೇಮಿ

ಮುಂಬೈ : ಲಿವ್ ಇನ್ ಸಂಗಾತಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಮತ್ತೊಂದು ಎದೆನಡುಗಿಸುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಮುಂಬಯಿ ಸಮೀಪದ ಥಾಣೆಯ ಮೀರಾ ರಸ್ತೆಯಲ್ಲಿನ ಬಾಡಿಗೆ ಮನೆಯಲ್ಲಿ ತನ್ನ ಲಿವ್ ಇನ್ ಸಂಗಾತಿಯನ್ನು ಬರ್ಬರವಾಗಿ ಕೊಂದು, ಆಕೆಯ ದೇಹವನ್ನು ತುಂಡು ತುಂಡು ಕತ್ತರಿಸಿದ ಪ್ರಕರಣದಲ್ಲಿ 56 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಮರ ಕತ್ತರಿಸುವ ಕಟರ್‌ನಿಂದ ಸಂಗಾತಿಯ ದೇಹವನ್ನು ಸುಮಾರು 12 ತುಂಡುಗಳನ್ನಾಗಿ ಕತ್ತರಿಸಿದ ಬಳಿಕ ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಬೇಯಿಸಿದ ಭಯಾನಕ ಸಂಗತಿ ಬೆಳಕಿಗೆ ಬಂದಿದೆ.

36 ವರ್ಷದ ಸರಸ್ವತಿ ವೈದ್ಯ ಎಂಬ ಮಹಿಳೆ ಜತೆ, ಆರೋಪಿ ಮನೋಜ್ ಸಹಾನಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಅಪಾರ್ಟ್‌ಮೆಂಟ್ ಕಟ್ಟಡದ 704ನೇ ಫ್ಲ್ಯಾಟ್‌ನಲ್ಲಿ ನೆಲೆಸಿದ್ದ. ಮನೋಜ್ ಬೊರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದು, ಸರಸ್ವತಿ ಜತೆ ಲಿವ್ ಇನ್ ಸಂಬಂಧದಲ್ಲಿದ್ದ. ಈ ಜೋಡಿ ವಾಸವಿದ್ದ ಫ್ಲ್ಯಾಟ್‌ನಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಅಲ್ಲಿನ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬುಧವಾರ ಸಂಜೆ ನಯಾನಗರ ಪೊಲೀಸ್ ಠಾಣೆಗೆ ಕಟ್ಟಡ ನಿವಾಸಿಗಳು ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಫ್ಲ್ಯಾಟ್ ಒಳಗೆ ಪ್ರವೇಶಿಸಿದಾಗ ಆಘಾತಕಾರಿ ದೃಶ್ಯ ಬೆಳಕಿಗೆ ಬಂದಿದೆ.

ಸಹಾನಿ ಮನೆಯಲ್ಲಿ ದೊರಕಿದ ಕೊಳೆತ ದೇಹದ ಭಾಗಗಳು, ಈ ಕೊಲೆ ಮೂರು – ನಾಲ್ಕು ದಿನ ಹಿಂದೆಯೇ ನಡೆದಿರಬಹುದು ಎಂಬ ಅನುಮಾನಕ್ಕೆ ಎಡೆಮಾಡಿದೆ. ಫ್ಲ್ಯಾಟ್‌ನಲ್ಲಿ ಪೊಲೀಸರ ತಂಡಕ್ಕೆ ಮಹಿಳೆಯ ಕೊಳೆತ ದೇಹ ಪತ್ತೆಯಾಗಿದ್ದು, ಅದನ್ನು ಹಲವು ತುಂಡುಗಳನ್ನಾಗಿ ಕತ್ತರಿಸಲಾಗಿತ್ತು.

“ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಇಬ್ಬರೂ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದು, ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ ವಾಸವಿದ್ದರು. ಯಾವುದೋ ವಿಚಾರಕ್ಕೆ ಅವರಿಬ್ಬರ ಮಧ್ಯೆ ಜಗಳವಾಗಿದ್ದು, ಆಕೆಯನ್ನು ಮನೋಜ್ ಕೊಲೆ ಮಾಡಿದ್ದಾನೆ. ಕಟರ್‌ನಿಂದ ಆಕೆಯ ದೇಹವನ್ನು ಹಲವು ತುಂಡುಗಳನ್ನಾಗಿ ಕತ್ತರಿಸಿದ್ದಾನೆ. ನಾವು ಮನೆಗೆ ತೆರಳಿ, ಬಾಗಿಲು ತೆರೆದಾಗ ಅದು ಕೊಲೆ ಪ್ರಕರಣ ಹಾಗೂ ಶಂಕಿತ ಆರೋಪಿ ಸಾಕ್ಷ್ಯವನ್ನು ಅಡಗಿಸಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಅರ್ಥವಾಗಿತ್ತು” ಎಂದು ಉಪ ಪೊಲೀಸ್ ಆಯುಕ್ತ ಜಯಂತ್ ಬಜಬಾಳೆ ತಿಳಿಸಿದ್ದಾರೆ.

ಈ ಕೊಲೆಗೆ ನೈಜ ಕಾರಣ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸಿದ್ದಾರೆ. ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅವರಲ್ಲಿ ಒಬ್ಬಾತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಫ್ಲ್ಯಾಟ್ ಒಳಗಿದ್ದ ಕೊಳೆತ ದೇಹದ ಭಾಗಗಳನ್ನು ಪೊಲೀಸ್ ಸಿಬ್ಬಂದಿ ಬೆಡ್‌ಶೀಟ್‌ನಲ್ಲಿ ಇರಿಸಿಕೊಂಡು ಹೊರಗೆ ತಂದಿದ್ದಾರೆ.

ಈ ಅಮಾನುಷ ಘಟನೆಯು ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ನೆನಪಿಗೆ ತಂದಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಶ್ರದ್ಧಾ ವಾಕರ್ ಮತ್ತು ಅಫ್ತಾಬ್ ಪೂನಾವಾಲಾ ಇಬ್ಬರೂ ದಿಲ್ಲಿಯಲ್ಲಿ ವಾಸವಿದ್ದರು. ಶ್ರದ್ಧಾಳನ್ನು ಕೊಲೆ ಮಾಡಿದ್ದ ಅಫ್ತಾಬ್, ಬಳಿಕ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ. ಬಳಿಕ ಒಂದೊಂದೇ ಭಾಗವನ್ನು ಕಾಡಿನಲ್ಲಿ ಎಸೆಯುತ್ತಾ ಬಂದಿದ್ದ. ಈ ಘಟನೆ ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು.

lokesh

Recent Posts

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

19 mins ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

1 hour ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

2 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 hours ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

2 hours ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

3 hours ago