ಮುಂಬೈ : ಲಿವ್ ಇನ್ ಸಂಗಾತಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಮತ್ತೊಂದು ಎದೆನಡುಗಿಸುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಮುಂಬಯಿ ಸಮೀಪದ ಥಾಣೆಯ ಮೀರಾ ರಸ್ತೆಯಲ್ಲಿನ ಬಾಡಿಗೆ ಮನೆಯಲ್ಲಿ ತನ್ನ ಲಿವ್ ಇನ್ ಸಂಗಾತಿಯನ್ನು ಬರ್ಬರವಾಗಿ ಕೊಂದು, ಆಕೆಯ ದೇಹವನ್ನು ತುಂಡು ತುಂಡು ಕತ್ತರಿಸಿದ ಪ್ರಕರಣದಲ್ಲಿ 56 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಮರ ಕತ್ತರಿಸುವ ಕಟರ್ನಿಂದ ಸಂಗಾತಿಯ ದೇಹವನ್ನು ಸುಮಾರು 12 ತುಂಡುಗಳನ್ನಾಗಿ ಕತ್ತರಿಸಿದ ಬಳಿಕ ದೇಹದ ಭಾಗಗಳನ್ನು ಕುಕ್ಕರ್ನಲ್ಲಿ ಬೇಯಿಸಿದ ಭಯಾನಕ ಸಂಗತಿ ಬೆಳಕಿಗೆ ಬಂದಿದೆ.
36 ವರ್ಷದ ಸರಸ್ವತಿ ವೈದ್ಯ ಎಂಬ ಮಹಿಳೆ ಜತೆ, ಆರೋಪಿ ಮನೋಜ್ ಸಹಾನಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಅಪಾರ್ಟ್ಮೆಂಟ್ ಕಟ್ಟಡದ 704ನೇ ಫ್ಲ್ಯಾಟ್ನಲ್ಲಿ ನೆಲೆಸಿದ್ದ. ಮನೋಜ್ ಬೊರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದು, ಸರಸ್ವತಿ ಜತೆ ಲಿವ್ ಇನ್ ಸಂಬಂಧದಲ್ಲಿದ್ದ. ಈ ಜೋಡಿ ವಾಸವಿದ್ದ ಫ್ಲ್ಯಾಟ್ನಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಅಲ್ಲಿನ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬುಧವಾರ ಸಂಜೆ ನಯಾನಗರ ಪೊಲೀಸ್ ಠಾಣೆಗೆ ಕಟ್ಟಡ ನಿವಾಸಿಗಳು ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಫ್ಲ್ಯಾಟ್ ಒಳಗೆ ಪ್ರವೇಶಿಸಿದಾಗ ಆಘಾತಕಾರಿ ದೃಶ್ಯ ಬೆಳಕಿಗೆ ಬಂದಿದೆ.
ಸಹಾನಿ ಮನೆಯಲ್ಲಿ ದೊರಕಿದ ಕೊಳೆತ ದೇಹದ ಭಾಗಗಳು, ಈ ಕೊಲೆ ಮೂರು – ನಾಲ್ಕು ದಿನ ಹಿಂದೆಯೇ ನಡೆದಿರಬಹುದು ಎಂಬ ಅನುಮಾನಕ್ಕೆ ಎಡೆಮಾಡಿದೆ. ಫ್ಲ್ಯಾಟ್ನಲ್ಲಿ ಪೊಲೀಸರ ತಂಡಕ್ಕೆ ಮಹಿಳೆಯ ಕೊಳೆತ ದೇಹ ಪತ್ತೆಯಾಗಿದ್ದು, ಅದನ್ನು ಹಲವು ತುಂಡುಗಳನ್ನಾಗಿ ಕತ್ತರಿಸಲಾಗಿತ್ತು.
“ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಇಬ್ಬರೂ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದು, ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ ವಾಸವಿದ್ದರು. ಯಾವುದೋ ವಿಚಾರಕ್ಕೆ ಅವರಿಬ್ಬರ ಮಧ್ಯೆ ಜಗಳವಾಗಿದ್ದು, ಆಕೆಯನ್ನು ಮನೋಜ್ ಕೊಲೆ ಮಾಡಿದ್ದಾನೆ. ಕಟರ್ನಿಂದ ಆಕೆಯ ದೇಹವನ್ನು ಹಲವು ತುಂಡುಗಳನ್ನಾಗಿ ಕತ್ತರಿಸಿದ್ದಾನೆ. ನಾವು ಮನೆಗೆ ತೆರಳಿ, ಬಾಗಿಲು ತೆರೆದಾಗ ಅದು ಕೊಲೆ ಪ್ರಕರಣ ಹಾಗೂ ಶಂಕಿತ ಆರೋಪಿ ಸಾಕ್ಷ್ಯವನ್ನು ಅಡಗಿಸಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಅರ್ಥವಾಗಿತ್ತು” ಎಂದು ಉಪ ಪೊಲೀಸ್ ಆಯುಕ್ತ ಜಯಂತ್ ಬಜಬಾಳೆ ತಿಳಿಸಿದ್ದಾರೆ.
ಈ ಕೊಲೆಗೆ ನೈಜ ಕಾರಣ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸಿದ್ದಾರೆ. ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅವರಲ್ಲಿ ಒಬ್ಬಾತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಫ್ಲ್ಯಾಟ್ ಒಳಗಿದ್ದ ಕೊಳೆತ ದೇಹದ ಭಾಗಗಳನ್ನು ಪೊಲೀಸ್ ಸಿಬ್ಬಂದಿ ಬೆಡ್ಶೀಟ್ನಲ್ಲಿ ಇರಿಸಿಕೊಂಡು ಹೊರಗೆ ತಂದಿದ್ದಾರೆ.
ಈ ಅಮಾನುಷ ಘಟನೆಯು ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ನೆನಪಿಗೆ ತಂದಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಶ್ರದ್ಧಾ ವಾಕರ್ ಮತ್ತು ಅಫ್ತಾಬ್ ಪೂನಾವಾಲಾ ಇಬ್ಬರೂ ದಿಲ್ಲಿಯಲ್ಲಿ ವಾಸವಿದ್ದರು. ಶ್ರದ್ಧಾಳನ್ನು ಕೊಲೆ ಮಾಡಿದ್ದ ಅಫ್ತಾಬ್, ಬಳಿಕ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇರಿಸಿದ್ದ. ಬಳಿಕ ಒಂದೊಂದೇ ಭಾಗವನ್ನು ಕಾಡಿನಲ್ಲಿ ಎಸೆಯುತ್ತಾ ಬಂದಿದ್ದ. ಈ ಘಟನೆ ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…