BREAKING NEWS

ಸೆಪ್ಟೆಂಬರ್‌ನಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭ

ಬೆಂಗಳೂರು : ಈ ವರ್ಷದ ಸೆಪ್ಟೆಂಬರ್ ತಿಂಗಳಿನಿಂದ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳು ಆರಂಭವಾಗಲಿವೆ. 4 ಹಾಗೂ 5 ವರ್ಷದ ಮಕ್ಕಳಿಗಾಗಿ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳನ್ನು ಆರಂಭಿಸುವಂತೆ ಪೋಷಕರಿಂದ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳನ್ನು ಆರಂಭಿಸಲು ಮುಂದಾಗಿದ್ದೇವೆ ಎಂದು ಸರ್ಕಾರ ಹೇಳಿದೆ.

ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿಗಳು ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುತ್ತಿಲ್ಲ ಎಂಬ ವರದಿಗಳು ಹೊರಬಂದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಾಜೆಕ್ಟ್-ಅನುಮೋದನಾ ಮಂಡಳಿಯು ಬೆಂಗಳೂರು ದಕ್ಷಿಣದಲ್ಲಿ 10 ಮತ್ತು ಬೆಂಗಳೂರು ಉತ್ತರದಲ್ಲಿ ನಾಲ್ಕು ಸೇರಿದಂತೆ 262 ಶಾಲೆಗಳಲ್ಲಿ ಎಲ್ಕೆಜಿ / ಯುಕೆಜಿ ವಿಭಾಗಗಳನ್ನು ಆರಂಭಿಸಲು ಮುಂದಾಗಿದೆ.

ಪ್ರಸ್ತುತ, 276 ಕರ್ನಾಟಕ ಸಾರ್ವಜನಿಕ ಶಾಲೆಗಳು ಸೇರಿದಂತೆ ಸುಮಾರು 900 ಶಾಲೆಗಳು ಎಲ್ಕೆಜಿ ಹಾಗೂ ಯುಕೆಜಿಗಳನ್ನು ಹೊಂದಿವೆ. ಶಾಲಾ ಅಭಿವೃದ್ಧಿ ಮೇಲ್ವಿಚಾರಣಾ ಸಮಿತಿಗಳು ( ಎಸ್ಡಿಎಂಸಿ ) 664 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕವನ್ನು ನಡೆಸುತ್ತಿದೆ. ಪ್ರತಿ ತರಗತಿಯು ಕನಿಷ್ಠ 20 ಮತ್ತು ಗರಿಷ್ಠ 30 ವಿದ್ಯಾರ್ಥಿಗಳ ಸಾಮಥ್ರ್ಯ ಹೊಂದಿರಬೇಕು. ಎಸ್ಡಿಎಂಸಿಗಳು 10 ತಿಂಗಳ ಅವಧಿಗೆ ಶಿಕ್ಷಕರನ್ನು ಮತ್ತು ಆಯಾಗಳನ್ನು ತಿಂಗಳಿಗೆ ಕ್ರಮವಾಗಿ ರೂ 7,000 ಮತ್ತು ರೂ 5,000 ಪಾವತಿಸಿ ನೇಮಕ ಮಾಡುತ್ತವೆ.

ಅಂಗನವಾಡಿಗಳು ಲಭ್ಯವಿದ್ದರೂ, ಅವುಗಳಲ್ಲಿ ಶಿಕ್ಷಣದ ಅಂಶವು ಅನೇಕರಲ್ಲಿ ಕೊರತೆಯಿದೆ. ಇಲ್ಲಿ ನಾವು ತರಬೇತಿ ಪಡೆದ ಶಿಕ್ಷಕರು, ವೈಜ್ಞಾನಿಕ ಪಠ್ಯಕ್ರಮವನ್ನು ವಿನ್ಯಾಸಗೊಳಿಸಿದ್ದೇವೆ. ಉತ್ತಮ ಮೂಲಸೌಕರ್ಯವನ್ನು ಹೊಂದಿದ್ದೇವೆ. ಇದು ಪೋಷಕರಿಗೆ ದೊಡ್ಡ ಆಕರ್ಷಣೆಯಾಗಿದೆ’ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದು ಸ್ವಾಗತಾರ್ಹ ಕ್ರಮವಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ದುಡಿಯುವ ಮಹಿಳೆಯರಿಗೆ ಮಕ್ಕಳನ್ನು ಬಿಡಲು ಸೂಕ್ತ ಸ್ಥಳವಾಗಿದೆ. ಇದು ಅತ್ಯಂತ ಪ್ರಮುಖವಾದ ಬೆಳವಣಿಗೆ. 2.5ರಿಂದ 6 ವರ್ಷಗಳ ನಡುವಿನ ವಯಸ್ಸು ಕೂಡ ವ್ಯಕ್ತಿಯ ಬೆಳವಣಿಗೆಯಲ್ಲಿ ಪ್ರಮುಖವಾಗಿದೆ. ಈ ಶಿಕ್ಷಕರು ಎಷ್ಟು ತರಬೇತಿ ಪಡೆದಿರುತ್ತಾರೆ ಮತ್ತು ಅವರ ಶೈಕ್ಷಣಿಕ ಅರ್ಹತೆ ಏನು ಎಂಬುದು ಪ್ರಶ್ನೆಯಾಗಿದೆ ತಿಳಿಸಿದ್ದಾರೆ.

andolanait

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

27 mins ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

2 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

2 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

2 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

3 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

4 hours ago