BREAKING NEWS

ಸೆಪ್ಟೆಂಬರ್‌ನಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭ

ಬೆಂಗಳೂರು : ಈ ವರ್ಷದ ಸೆಪ್ಟೆಂಬರ್ ತಿಂಗಳಿನಿಂದ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳು ಆರಂಭವಾಗಲಿವೆ. 4 ಹಾಗೂ 5 ವರ್ಷದ ಮಕ್ಕಳಿಗಾಗಿ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳನ್ನು ಆರಂಭಿಸುವಂತೆ ಪೋಷಕರಿಂದ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳನ್ನು ಆರಂಭಿಸಲು ಮುಂದಾಗಿದ್ದೇವೆ ಎಂದು ಸರ್ಕಾರ ಹೇಳಿದೆ.

ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿಗಳು ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುತ್ತಿಲ್ಲ ಎಂಬ ವರದಿಗಳು ಹೊರಬಂದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಾಜೆಕ್ಟ್-ಅನುಮೋದನಾ ಮಂಡಳಿಯು ಬೆಂಗಳೂರು ದಕ್ಷಿಣದಲ್ಲಿ 10 ಮತ್ತು ಬೆಂಗಳೂರು ಉತ್ತರದಲ್ಲಿ ನಾಲ್ಕು ಸೇರಿದಂತೆ 262 ಶಾಲೆಗಳಲ್ಲಿ ಎಲ್ಕೆಜಿ / ಯುಕೆಜಿ ವಿಭಾಗಗಳನ್ನು ಆರಂಭಿಸಲು ಮುಂದಾಗಿದೆ.

ಪ್ರಸ್ತುತ, 276 ಕರ್ನಾಟಕ ಸಾರ್ವಜನಿಕ ಶಾಲೆಗಳು ಸೇರಿದಂತೆ ಸುಮಾರು 900 ಶಾಲೆಗಳು ಎಲ್ಕೆಜಿ ಹಾಗೂ ಯುಕೆಜಿಗಳನ್ನು ಹೊಂದಿವೆ. ಶಾಲಾ ಅಭಿವೃದ್ಧಿ ಮೇಲ್ವಿಚಾರಣಾ ಸಮಿತಿಗಳು ( ಎಸ್ಡಿಎಂಸಿ ) 664 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕವನ್ನು ನಡೆಸುತ್ತಿದೆ. ಪ್ರತಿ ತರಗತಿಯು ಕನಿಷ್ಠ 20 ಮತ್ತು ಗರಿಷ್ಠ 30 ವಿದ್ಯಾರ್ಥಿಗಳ ಸಾಮಥ್ರ್ಯ ಹೊಂದಿರಬೇಕು. ಎಸ್ಡಿಎಂಸಿಗಳು 10 ತಿಂಗಳ ಅವಧಿಗೆ ಶಿಕ್ಷಕರನ್ನು ಮತ್ತು ಆಯಾಗಳನ್ನು ತಿಂಗಳಿಗೆ ಕ್ರಮವಾಗಿ ರೂ 7,000 ಮತ್ತು ರೂ 5,000 ಪಾವತಿಸಿ ನೇಮಕ ಮಾಡುತ್ತವೆ.

ಅಂಗನವಾಡಿಗಳು ಲಭ್ಯವಿದ್ದರೂ, ಅವುಗಳಲ್ಲಿ ಶಿಕ್ಷಣದ ಅಂಶವು ಅನೇಕರಲ್ಲಿ ಕೊರತೆಯಿದೆ. ಇಲ್ಲಿ ನಾವು ತರಬೇತಿ ಪಡೆದ ಶಿಕ್ಷಕರು, ವೈಜ್ಞಾನಿಕ ಪಠ್ಯಕ್ರಮವನ್ನು ವಿನ್ಯಾಸಗೊಳಿಸಿದ್ದೇವೆ. ಉತ್ತಮ ಮೂಲಸೌಕರ್ಯವನ್ನು ಹೊಂದಿದ್ದೇವೆ. ಇದು ಪೋಷಕರಿಗೆ ದೊಡ್ಡ ಆಕರ್ಷಣೆಯಾಗಿದೆ’ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದು ಸ್ವಾಗತಾರ್ಹ ಕ್ರಮವಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ದುಡಿಯುವ ಮಹಿಳೆಯರಿಗೆ ಮಕ್ಕಳನ್ನು ಬಿಡಲು ಸೂಕ್ತ ಸ್ಥಳವಾಗಿದೆ. ಇದು ಅತ್ಯಂತ ಪ್ರಮುಖವಾದ ಬೆಳವಣಿಗೆ. 2.5ರಿಂದ 6 ವರ್ಷಗಳ ನಡುವಿನ ವಯಸ್ಸು ಕೂಡ ವ್ಯಕ್ತಿಯ ಬೆಳವಣಿಗೆಯಲ್ಲಿ ಪ್ರಮುಖವಾಗಿದೆ. ಈ ಶಿಕ್ಷಕರು ಎಷ್ಟು ತರಬೇತಿ ಪಡೆದಿರುತ್ತಾರೆ ಮತ್ತು ಅವರ ಶೈಕ್ಷಣಿಕ ಅರ್ಹತೆ ಏನು ಎಂಬುದು ಪ್ರಶ್ನೆಯಾಗಿದೆ ತಿಳಿಸಿದ್ದಾರೆ.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago