BREAKING NEWS

ಸೆಪ್ಟೆಂಬರ್‌ನಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭ

ಬೆಂಗಳೂರು : ಈ ವರ್ಷದ ಸೆಪ್ಟೆಂಬರ್ ತಿಂಗಳಿನಿಂದ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳು ಆರಂಭವಾಗಲಿವೆ. 4 ಹಾಗೂ 5 ವರ್ಷದ ಮಕ್ಕಳಿಗಾಗಿ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳನ್ನು ಆರಂಭಿಸುವಂತೆ ಪೋಷಕರಿಂದ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳನ್ನು ಆರಂಭಿಸಲು ಮುಂದಾಗಿದ್ದೇವೆ ಎಂದು ಸರ್ಕಾರ ಹೇಳಿದೆ.

ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿಗಳು ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುತ್ತಿಲ್ಲ ಎಂಬ ವರದಿಗಳು ಹೊರಬಂದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಾಜೆಕ್ಟ್-ಅನುಮೋದನಾ ಮಂಡಳಿಯು ಬೆಂಗಳೂರು ದಕ್ಷಿಣದಲ್ಲಿ 10 ಮತ್ತು ಬೆಂಗಳೂರು ಉತ್ತರದಲ್ಲಿ ನಾಲ್ಕು ಸೇರಿದಂತೆ 262 ಶಾಲೆಗಳಲ್ಲಿ ಎಲ್ಕೆಜಿ / ಯುಕೆಜಿ ವಿಭಾಗಗಳನ್ನು ಆರಂಭಿಸಲು ಮುಂದಾಗಿದೆ.

ಪ್ರಸ್ತುತ, 276 ಕರ್ನಾಟಕ ಸಾರ್ವಜನಿಕ ಶಾಲೆಗಳು ಸೇರಿದಂತೆ ಸುಮಾರು 900 ಶಾಲೆಗಳು ಎಲ್ಕೆಜಿ ಹಾಗೂ ಯುಕೆಜಿಗಳನ್ನು ಹೊಂದಿವೆ. ಶಾಲಾ ಅಭಿವೃದ್ಧಿ ಮೇಲ್ವಿಚಾರಣಾ ಸಮಿತಿಗಳು ( ಎಸ್ಡಿಎಂಸಿ ) 664 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕವನ್ನು ನಡೆಸುತ್ತಿದೆ. ಪ್ರತಿ ತರಗತಿಯು ಕನಿಷ್ಠ 20 ಮತ್ತು ಗರಿಷ್ಠ 30 ವಿದ್ಯಾರ್ಥಿಗಳ ಸಾಮಥ್ರ್ಯ ಹೊಂದಿರಬೇಕು. ಎಸ್ಡಿಎಂಸಿಗಳು 10 ತಿಂಗಳ ಅವಧಿಗೆ ಶಿಕ್ಷಕರನ್ನು ಮತ್ತು ಆಯಾಗಳನ್ನು ತಿಂಗಳಿಗೆ ಕ್ರಮವಾಗಿ ರೂ 7,000 ಮತ್ತು ರೂ 5,000 ಪಾವತಿಸಿ ನೇಮಕ ಮಾಡುತ್ತವೆ.

ಅಂಗನವಾಡಿಗಳು ಲಭ್ಯವಿದ್ದರೂ, ಅವುಗಳಲ್ಲಿ ಶಿಕ್ಷಣದ ಅಂಶವು ಅನೇಕರಲ್ಲಿ ಕೊರತೆಯಿದೆ. ಇಲ್ಲಿ ನಾವು ತರಬೇತಿ ಪಡೆದ ಶಿಕ್ಷಕರು, ವೈಜ್ಞಾನಿಕ ಪಠ್ಯಕ್ರಮವನ್ನು ವಿನ್ಯಾಸಗೊಳಿಸಿದ್ದೇವೆ. ಉತ್ತಮ ಮೂಲಸೌಕರ್ಯವನ್ನು ಹೊಂದಿದ್ದೇವೆ. ಇದು ಪೋಷಕರಿಗೆ ದೊಡ್ಡ ಆಕರ್ಷಣೆಯಾಗಿದೆ’ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದು ಸ್ವಾಗತಾರ್ಹ ಕ್ರಮವಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ದುಡಿಯುವ ಮಹಿಳೆಯರಿಗೆ ಮಕ್ಕಳನ್ನು ಬಿಡಲು ಸೂಕ್ತ ಸ್ಥಳವಾಗಿದೆ. ಇದು ಅತ್ಯಂತ ಪ್ರಮುಖವಾದ ಬೆಳವಣಿಗೆ. 2.5ರಿಂದ 6 ವರ್ಷಗಳ ನಡುವಿನ ವಯಸ್ಸು ಕೂಡ ವ್ಯಕ್ತಿಯ ಬೆಳವಣಿಗೆಯಲ್ಲಿ ಪ್ರಮುಖವಾಗಿದೆ. ಈ ಶಿಕ್ಷಕರು ಎಷ್ಟು ತರಬೇತಿ ಪಡೆದಿರುತ್ತಾರೆ ಮತ್ತು ಅವರ ಶೈಕ್ಷಣಿಕ ಅರ್ಹತೆ ಏನು ಎಂಬುದು ಪ್ರಶ್ನೆಯಾಗಿದೆ ತಿಳಿಸಿದ್ದಾರೆ.

andolanait

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

2 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

4 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

4 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

5 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

6 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

9 hours ago