BREAKING NEWS

ಶ್ರೀಲಂಕಾಕ್ಕೆ ಸಾಲ ನೀಡಿಕೆ : ಉನ್ನತ ಮಟ್ಟದ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ

ವಾಷಿಂಗ್ಟನ್: ಶ್ರೀಲಂಕಾಕ್ಕೆ ಸಾಲ ನೀಡಿ, ಅದರ ಆರ್ಥಿಕತೆಯನ್ನು ಹಳಿಗೆ ತರುವ ಸಂಬಂಧ ಚರ್ಚಿಸಲು ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪಾಲ್ಗೊಂಡಿದ್ದರು.

ಆರ್ಥಿಕ ವಿದ್ಯಮಾನಗಳ ಕುರಿತು ಚರ್ಚಿಸಲು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಹಾಗೂ ವಿಶ್ವಬ್ಯಾಂಕ್‌ ವತಿಯಿಂದ ನಡೆಯುತ್ತಿರುವ ಸಭೆಯ ಸಂದರ್ಭದಲ್ಲಿಯೇ ಈ ಉನ್ನತ ಮಟ್ಟದ ಸಭೆಯೂ ನಡೆಯಿತು.

ಯಾವುದೇ ದೇಶಕ್ಕೆ ಸಾಲ ನೀಡುವ ಕುರಿತ ಚರ್ಚೆ ವೇಳೆ, ಎಲ್ಲ ಸಾಲದಾತರನ್ನು ಸಮಾನವಾಗಿ ಕಾಣಬೇಕು ಹಾಗೂ ಪಾರದರ್ಶಕತೆಯನ್ನು ಖಾತರಿಪಡಿಸುವುದು ಅಗತ್ಯ ಎಂದು ನಿರ್ಮಲಾ ಸೀತಾರಾಮನ್‌ ಪ್ರತಿಪಾದಿಸಿದರು.

ಜಪಾನ್‌ ಹಣಕಾಸು ಸಚಿವ ಸುಜುಕಿ ಶುನಿಚಿ, ಶ್ರೀಲಂಕಾ ಸಚಿವ ಶೆಹನ್ ಸೆಮಾಸಿಂಘೆ, ಫ್ರಾನ್ಸ್‌ನ ಖಜಾನೆ ಇಲಾಖೆಯ ಪ್ರಧಾನ ನಿರ್ದೇಶಕ ಇಮ್ಯಾನುಯೆಲ್ ಮೌಲಿನ್‌ ಸಭೆಯಲ್ಲಿ ಇದ್ದರು. ಶ್ರೀಲಂಕಾ ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಅವರು ವರ್ಚುವಲ್‌ ವಿಧಾನದ ಮೂಲಕ ಪಾಲ್ಗೊಂಡಿದ್ದರು.

ಆಹ್ವಾನ: ‘ಜಿ–7 ಗುಂಪಿನ ಅಧ್ಯಕ್ಷ ಸ್ಥಾನದಲ್ಲಿರುವ ಜಪಾನ್‌, ಸಂಘಟನೆಯ ಸದಸ್ಯ ರಾಷ್ಟ್ರಗಳ ಹಣಕಾಸು ಸಚಿವರ ಹಾಗೂ ಕೇಂದ್ರೀಯ ಬ್ಯಾಂಕುಗಳ ಗವರ್ನರ್‌ಗಳ ಸಭೆಗೆ ನನ್ನನ್ನು ಆಹ್ವಾನಿಸಿದ್ದು, ಸಭೆಯಲ್ಲಿ ಪಾಲ್ಗೊಳ್ಳುವ ಆಲೋಚನೆ ಇದೆ’ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

‘ಜಿ–7 ಹಾಗೂ ಜಿ–20 ಸದಸ್ಯ ರಾಷ್ಟ್ರಗಳ ನಡುವೆ ಸಮನ್ವಯ ಸಾಧಿಸಲು ಜಪಾನ್‌ ಮತ್ತು ಭಾರತ ಒಟ್ಟಿಗೆ ಕೆಲಸ ಮಾಡಲಿವೆ’ ಎಂದೂ ಹೇಳಿದರು.

andolanait

Recent Posts

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

7 mins ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…

31 mins ago

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳಕರ್‌

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…

40 mins ago

ತೀವ್ರಗೊಂಡ ಪೂರ್ವಮುಂಗಾರು : ಏ.1ರವರೆಗೆ ರಾಜ್ಯದಲ್ಲಿ ಆಲಿಕಲ್ಲು ಮಳೆ

ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು…

48 mins ago

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

1 hour ago

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

2 hours ago