BREAKING NEWS

ಶ್ರೀಲಂಕಾಕ್ಕೆ ಸಾಲ ನೀಡಿಕೆ : ಉನ್ನತ ಮಟ್ಟದ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ

ವಾಷಿಂಗ್ಟನ್: ಶ್ರೀಲಂಕಾಕ್ಕೆ ಸಾಲ ನೀಡಿ, ಅದರ ಆರ್ಥಿಕತೆಯನ್ನು ಹಳಿಗೆ ತರುವ ಸಂಬಂಧ ಚರ್ಚಿಸಲು ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪಾಲ್ಗೊಂಡಿದ್ದರು.

ಆರ್ಥಿಕ ವಿದ್ಯಮಾನಗಳ ಕುರಿತು ಚರ್ಚಿಸಲು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಹಾಗೂ ವಿಶ್ವಬ್ಯಾಂಕ್‌ ವತಿಯಿಂದ ನಡೆಯುತ್ತಿರುವ ಸಭೆಯ ಸಂದರ್ಭದಲ್ಲಿಯೇ ಈ ಉನ್ನತ ಮಟ್ಟದ ಸಭೆಯೂ ನಡೆಯಿತು.

ಯಾವುದೇ ದೇಶಕ್ಕೆ ಸಾಲ ನೀಡುವ ಕುರಿತ ಚರ್ಚೆ ವೇಳೆ, ಎಲ್ಲ ಸಾಲದಾತರನ್ನು ಸಮಾನವಾಗಿ ಕಾಣಬೇಕು ಹಾಗೂ ಪಾರದರ್ಶಕತೆಯನ್ನು ಖಾತರಿಪಡಿಸುವುದು ಅಗತ್ಯ ಎಂದು ನಿರ್ಮಲಾ ಸೀತಾರಾಮನ್‌ ಪ್ರತಿಪಾದಿಸಿದರು.

ಜಪಾನ್‌ ಹಣಕಾಸು ಸಚಿವ ಸುಜುಕಿ ಶುನಿಚಿ, ಶ್ರೀಲಂಕಾ ಸಚಿವ ಶೆಹನ್ ಸೆಮಾಸಿಂಘೆ, ಫ್ರಾನ್ಸ್‌ನ ಖಜಾನೆ ಇಲಾಖೆಯ ಪ್ರಧಾನ ನಿರ್ದೇಶಕ ಇಮ್ಯಾನುಯೆಲ್ ಮೌಲಿನ್‌ ಸಭೆಯಲ್ಲಿ ಇದ್ದರು. ಶ್ರೀಲಂಕಾ ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಅವರು ವರ್ಚುವಲ್‌ ವಿಧಾನದ ಮೂಲಕ ಪಾಲ್ಗೊಂಡಿದ್ದರು.

ಆಹ್ವಾನ: ‘ಜಿ–7 ಗುಂಪಿನ ಅಧ್ಯಕ್ಷ ಸ್ಥಾನದಲ್ಲಿರುವ ಜಪಾನ್‌, ಸಂಘಟನೆಯ ಸದಸ್ಯ ರಾಷ್ಟ್ರಗಳ ಹಣಕಾಸು ಸಚಿವರ ಹಾಗೂ ಕೇಂದ್ರೀಯ ಬ್ಯಾಂಕುಗಳ ಗವರ್ನರ್‌ಗಳ ಸಭೆಗೆ ನನ್ನನ್ನು ಆಹ್ವಾನಿಸಿದ್ದು, ಸಭೆಯಲ್ಲಿ ಪಾಲ್ಗೊಳ್ಳುವ ಆಲೋಚನೆ ಇದೆ’ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

‘ಜಿ–7 ಹಾಗೂ ಜಿ–20 ಸದಸ್ಯ ರಾಷ್ಟ್ರಗಳ ನಡುವೆ ಸಮನ್ವಯ ಸಾಧಿಸಲು ಜಪಾನ್‌ ಮತ್ತು ಭಾರತ ಒಟ್ಟಿಗೆ ಕೆಲಸ ಮಾಡಲಿವೆ’ ಎಂದೂ ಹೇಳಿದರು.

andolanait

Recent Posts

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…

2 mins ago

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ ವಚನ

ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…

22 mins ago

ದಂಟಳ್ಳಿ ಯೋಜನೆಗೆ ಡಿ.ಪಿ.ಆರ್ʼಗೆ ಒತ್ತಾಯಸಿ ಬೃಹತ್‌ ಪ್ರತಿಭಟನೆ

ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…

33 mins ago

ಮೈಸೂರಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಎನ್‌ಸಿಬಿ ಅಧಿಕೃತ ಮಾಹಿತಿ

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…

50 mins ago

ಸ್ವತಃ ಎದೆಗೆ ಗುಂಡಿಟ್ಟುಕೊಂಡ ಸಿ.ಜೆ.ರಾಯ್ :‌ ಮರಣೋತ್ತರ ಪರೀಕ್ಷೆಯಲ್ಲಿ ಧೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

2 hours ago

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…

2 hours ago