BREAKING NEWS

ಲೋಕಸಭಾ ಚುನಾವಣೆ: ಬಿಜೆಪಿಯಿಂದ ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳ ನೇಮಕ

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮುಂಬರುವ ಲೋಕಸಭೆ ಚುನಾವಣೆಗಾಗಿ ಈ ಕೆಳಗಿನ ರಾಜ್ಯಗಳಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ಮತ್ತು ಸಹ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿ ಶನಿವಾರ ಆದೇಶ ಹೊರಡಿಸಿದ್ದಾರೆ.

ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ಮತ್ತು ಸುಧಾಕರ್ ರೆಡ್ಡಿ ಅವರನ್ನು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ.

ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಕೇರಳದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಉಸ್ತುವಾರಿಗಳ ಪಟ್ಟಿ: ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ, ವಿಜಯಪಾಲ್ ತೋಮರ್ ಒಡಿಶಾಗೆ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ.

ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಕೇರಳದ ಉಸ್ತುವಾರಿಯಾಗಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್​ಗೆ ವೈ ಸತ್ಯ ಕುಮಾರ್, ಅರುಣಾಚಲ ಪ್ರದೇಶಕ್ಕೆ ಅಶೋಕ್ ಸಿಂಘಾಲ್, ಚಂಡೀಗಢಕ್ಕೆ ವಿಜಯಭಾಯಿ ರೂಪಾನಿ, ಗೋವಾಕ್ಕೆ ಆಶಿಶ್ ಸೂದ್, ಜಾರ್ಖಂಡ್​ಗೆ ಲಕ್ಷ್ಮೀಕಾಂತ ಬಾಜಪೇಯಿ, ಲಡಾಖ್​ಗೆ ತರುಣ್ ಚುಗ್, ಲಕ್ಷ್ಯದ್ವೀಪಕ್ಕೆ ಅರವಿಂದ್ ಮೆನನ್, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನಾ, ಸಿಕ್ಕಿಂಗೆ ದಿಲೀಪ್ ಜೈಸ್ವಾಲ್, ಉತ್ತರಾಖಂಡಕ್ಕೆ ದುಶ್ಯಂತ್ ಕುಮಾರ್ ಗೌತಮ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಬಿಹಾರಕ್ಕೆ ವಿನೋದ್ ತಾವ್ಡೆ, ಹರಿಯಾಣಕ್ಕೆ ಬಿಪ್ಲಬ್ ಕುಮಾರ್ ದೇವ್, ಹಿಮಾಚಲ ಪ್ರದೇಶಕ್ಕೆ ಶ್ರೀಕಾಂತ್ ಶರ್ಮಾ, ಮಧ್ಯಪ್ರದೇಶಕ್ಕೆ ಮಹೇಂದ್ರ ಕುಮಾರ್ ಸಿಂಗ್, ಒಡಿಶಾಕ್ಕೆ ವಿಜಯಪಾಲ್ ಸಿಂಗ್ ತೋಮರ್, ತಮಿಳುನಾಡಿಗೆ ಅರವಿಂದ್ ಮೆನನ್, ಪಶ್ಚಿಮ ಬಂಗಾಳಕ್ಕೆ ಮಂಗಲ್ ಪಾಂಡೆ ಇವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಲೋಕಸಭಾ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸಲು ಸಲಹೆ ಸೂಚನೆ ನೀಡುವಂತೆ ಯುವ ಮತದಾರರನ್ನು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಆಹ್ವಾನಿಸಿದ್ದು, ನಮೋ ಅಪ್ಲಿಕೇಶನ್‌ನಲ್ಲಿ ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಕೇಳಿಕೊಂಡಿದ್ದಾರೆ.

andolanait

Recent Posts

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

45 mins ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

48 mins ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

53 mins ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

57 mins ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

1 hour ago

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

1 hour ago