BREAKING NEWS

ಲೋಕಸಭಾ ಚುನಾವಣೆ: ಎಕ್ಸಿಟ್‌ಪೋಲ್‌ ಸಮೀಕ್ಷೆ, ಯಾರಿಗೆ ಎಷ್ಟು ಸ್ಥಾನ

ಮೈಸೂರು: ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣೆ ಇಂದು(ಜೂ.1) ಮುಕ್ತಾಯವಾಗಿದೆ. ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಸತತ ಮೂರನೇ ಬಾರಿ ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆಡಳಿತ ಹಾಗೂ ವಿರೋಧ ಪಕ್ಷಗಳ ಮೈತ್ರಿಕೂಟಗಳೂ ಎಷ್ಟು ಸ್ಥಾನ ಗಳಿಸಲಿವೆ ಎಂಬ ಮಾಹಿತಿ ಇಲ್ಲಿದೆ.

ಆಜ್‌ತಕ್‌, ಎಬಿಸಿ ನ್ಯೂಸ್‌, ಝೀ ನ್ಯೂಸ್‌, ಇಂಡಿಯಾ ಟಿವಿ, ಸಿಎನ್‌ಎಕ್ಸ್‌, ನ್ಯೂಎಕ್ಸ್‌, ನ್ಯೂಸ್‌18, ಟೈಮ್ಸ್‌ ನೌ ಸೇರಿದಂತೆ ಅನೇಕ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ. ಈ ಸಮೀಕ್ಷೆಗಳು ಕರ್ನಾಟಕದಲ್ಲಿ ಎನ್‌ಡಿಎ ಒಕ್ಕೂಟ ಹೆಚ್ಚಿನ ಸ್ಥಾನಗಳನ್ನೂ ಗೆಲ್ಲುವುದಾಗಿ ಹೇಳಿವೆ.

ಎಕ್ಸಿಟ್‌ ಪೋಲ್‌ ಸಮೀಕ್ಷೆ ಇಂತಿದೆ.

ಲೋಕ್‌ ಪೋಲ್
ಎನ್ ಡಿಎ: 325-335
ಇಂಡಿಯಾ ಕೂಟ: 155-165
ಇತರೆ: 48-55

ಮ್ಯಾಟ್ರೀಜ್‌ ಸಮೀಕ್ಷೆ
ಎನ್ ಡಿಎ: 353-336
ಇಂಡಿಯಾ ಕೂಟ: 118-133
ಇತರೆ: 43-48

ಇಂಡಿಯಾ ನ್ಯೂಸ್
ಎನ್ ಡಿಎ: 371
ಇಂಡಿಯಾ ಕೂಟ: 125
ಇತರೆ: 47

ರಿಪಬ್ಲಿಕ್‌ ಟಿವಿ-ಪಿ ಮಾರ್ಕ್‌
ಎನ್ ಡಿಎ: 359
ಇಂಡಿಯಾ ಕೂಟ: 154
ಇತರೆ: 30

ಜನ್‌ ಕೀ ಬಾತ್‌
ಎನ್ ಡಿಎ: 362-392
ಇಂಡಿಯಾ ಕೂಟ: 141-161
ಇತರೆ:10-20

ಕರ್ನಾಟಕದ ಸಮೀಕ್ಷೆ

ಒಟ್ಟು 28 ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದವು. ಇದೀಗ ಕರ್ನಾಟಕ ಸಮೀಕ್ಷ ಕೂಡ ಹೊರಬಿದ್ದಿದೆ. ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಾಗಿ ಸಮೀಕ್ಷೆಗಳು ಹೇಳುತ್ತಿವೆ.

ಸಿ ವೋಟರ್‌
ಬಿಜೆಪಿ: 23
ಕಾಂಗ್ರೆಸ್:‌ 3-5
ಜೆಡಿಎಸ್:‌ 2

ಇಂಡಿಯಾ ಟಿವಿ:
ಬಿಜೆಪಿ: 18-22
ಜೆಡಿಎಸ್:‌ 1-3
ಕಾಂಗ್ರೆಸ್:‌ 4-8

ಇಂಡಿಯಾ ಟುಡೇ:
ಬಿಜೆಪಿ: 20-22
ಜೆಡಿಎಸ್: 2-3
ಕಾಂಗ್ರೆಸ್:‌ 3-7

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

2 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

3 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

3 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

3 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

4 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

4 hours ago