BREAKING NEWS

ಲೋಕಸಭಾ ಚುನಾವಣೆ: ಎಕ್ಸಿಟ್‌ಪೋಲ್‌ ಸಮೀಕ್ಷೆ, ಯಾರಿಗೆ ಎಷ್ಟು ಸ್ಥಾನ

ಮೈಸೂರು: ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣೆ ಇಂದು(ಜೂ.1) ಮುಕ್ತಾಯವಾಗಿದೆ. ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಸತತ ಮೂರನೇ ಬಾರಿ ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆಡಳಿತ ಹಾಗೂ ವಿರೋಧ ಪಕ್ಷಗಳ ಮೈತ್ರಿಕೂಟಗಳೂ ಎಷ್ಟು ಸ್ಥಾನ ಗಳಿಸಲಿವೆ ಎಂಬ ಮಾಹಿತಿ ಇಲ್ಲಿದೆ.

ಆಜ್‌ತಕ್‌, ಎಬಿಸಿ ನ್ಯೂಸ್‌, ಝೀ ನ್ಯೂಸ್‌, ಇಂಡಿಯಾ ಟಿವಿ, ಸಿಎನ್‌ಎಕ್ಸ್‌, ನ್ಯೂಎಕ್ಸ್‌, ನ್ಯೂಸ್‌18, ಟೈಮ್ಸ್‌ ನೌ ಸೇರಿದಂತೆ ಅನೇಕ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ. ಈ ಸಮೀಕ್ಷೆಗಳು ಕರ್ನಾಟಕದಲ್ಲಿ ಎನ್‌ಡಿಎ ಒಕ್ಕೂಟ ಹೆಚ್ಚಿನ ಸ್ಥಾನಗಳನ್ನೂ ಗೆಲ್ಲುವುದಾಗಿ ಹೇಳಿವೆ.

ಎಕ್ಸಿಟ್‌ ಪೋಲ್‌ ಸಮೀಕ್ಷೆ ಇಂತಿದೆ.

ಲೋಕ್‌ ಪೋಲ್
ಎನ್ ಡಿಎ: 325-335
ಇಂಡಿಯಾ ಕೂಟ: 155-165
ಇತರೆ: 48-55

ಮ್ಯಾಟ್ರೀಜ್‌ ಸಮೀಕ್ಷೆ
ಎನ್ ಡಿಎ: 353-336
ಇಂಡಿಯಾ ಕೂಟ: 118-133
ಇತರೆ: 43-48

ಇಂಡಿಯಾ ನ್ಯೂಸ್
ಎನ್ ಡಿಎ: 371
ಇಂಡಿಯಾ ಕೂಟ: 125
ಇತರೆ: 47

ರಿಪಬ್ಲಿಕ್‌ ಟಿವಿ-ಪಿ ಮಾರ್ಕ್‌
ಎನ್ ಡಿಎ: 359
ಇಂಡಿಯಾ ಕೂಟ: 154
ಇತರೆ: 30

ಜನ್‌ ಕೀ ಬಾತ್‌
ಎನ್ ಡಿಎ: 362-392
ಇಂಡಿಯಾ ಕೂಟ: 141-161
ಇತರೆ:10-20

ಕರ್ನಾಟಕದ ಸಮೀಕ್ಷೆ

ಒಟ್ಟು 28 ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದವು. ಇದೀಗ ಕರ್ನಾಟಕ ಸಮೀಕ್ಷ ಕೂಡ ಹೊರಬಿದ್ದಿದೆ. ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಾಗಿ ಸಮೀಕ್ಷೆಗಳು ಹೇಳುತ್ತಿವೆ.

ಸಿ ವೋಟರ್‌
ಬಿಜೆಪಿ: 23
ಕಾಂಗ್ರೆಸ್:‌ 3-5
ಜೆಡಿಎಸ್:‌ 2

ಇಂಡಿಯಾ ಟಿವಿ:
ಬಿಜೆಪಿ: 18-22
ಜೆಡಿಎಸ್:‌ 1-3
ಕಾಂಗ್ರೆಸ್:‌ 4-8

ಇಂಡಿಯಾ ಟುಡೇ:
ಬಿಜೆಪಿ: 20-22
ಜೆಡಿಎಸ್: 2-3
ಕಾಂಗ್ರೆಸ್:‌ 3-7

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

5 mins ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

10 mins ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

15 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಗೆದಷ್ಟು ಬಹಿರಂಗ; ರಾಮಮಂದಿರ ಕಾಣಿಕೆ ಲೂಟಿ

ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…

21 mins ago

ಎಸ್‌ಐಆರ್: ಮಿಶ್ರ ಪ್ರತಿಕ್ರಿಯೆ

ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…

26 mins ago