BREAKING NEWS

ಲೋಕಸಭಾ ಚುನಾವಣೆ: ಎಕ್ಸಿಟ್‌ಪೋಲ್‌ ಸಮೀಕ್ಷೆ, ಯಾರಿಗೆ ಎಷ್ಟು ಸ್ಥಾನ

ಮೈಸೂರು: ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣೆ ಇಂದು(ಜೂ.1) ಮುಕ್ತಾಯವಾಗಿದೆ. ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಸತತ ಮೂರನೇ ಬಾರಿ ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆಡಳಿತ ಹಾಗೂ ವಿರೋಧ ಪಕ್ಷಗಳ ಮೈತ್ರಿಕೂಟಗಳೂ ಎಷ್ಟು ಸ್ಥಾನ ಗಳಿಸಲಿವೆ ಎಂಬ ಮಾಹಿತಿ ಇಲ್ಲಿದೆ.

ಆಜ್‌ತಕ್‌, ಎಬಿಸಿ ನ್ಯೂಸ್‌, ಝೀ ನ್ಯೂಸ್‌, ಇಂಡಿಯಾ ಟಿವಿ, ಸಿಎನ್‌ಎಕ್ಸ್‌, ನ್ಯೂಎಕ್ಸ್‌, ನ್ಯೂಸ್‌18, ಟೈಮ್ಸ್‌ ನೌ ಸೇರಿದಂತೆ ಅನೇಕ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ. ಈ ಸಮೀಕ್ಷೆಗಳು ಕರ್ನಾಟಕದಲ್ಲಿ ಎನ್‌ಡಿಎ ಒಕ್ಕೂಟ ಹೆಚ್ಚಿನ ಸ್ಥಾನಗಳನ್ನೂ ಗೆಲ್ಲುವುದಾಗಿ ಹೇಳಿವೆ.

ಎಕ್ಸಿಟ್‌ ಪೋಲ್‌ ಸಮೀಕ್ಷೆ ಇಂತಿದೆ.

ಲೋಕ್‌ ಪೋಲ್
ಎನ್ ಡಿಎ: 325-335
ಇಂಡಿಯಾ ಕೂಟ: 155-165
ಇತರೆ: 48-55

ಮ್ಯಾಟ್ರೀಜ್‌ ಸಮೀಕ್ಷೆ
ಎನ್ ಡಿಎ: 353-336
ಇಂಡಿಯಾ ಕೂಟ: 118-133
ಇತರೆ: 43-48

ಇಂಡಿಯಾ ನ್ಯೂಸ್
ಎನ್ ಡಿಎ: 371
ಇಂಡಿಯಾ ಕೂಟ: 125
ಇತರೆ: 47

ರಿಪಬ್ಲಿಕ್‌ ಟಿವಿ-ಪಿ ಮಾರ್ಕ್‌
ಎನ್ ಡಿಎ: 359
ಇಂಡಿಯಾ ಕೂಟ: 154
ಇತರೆ: 30

ಜನ್‌ ಕೀ ಬಾತ್‌
ಎನ್ ಡಿಎ: 362-392
ಇಂಡಿಯಾ ಕೂಟ: 141-161
ಇತರೆ:10-20

ಕರ್ನಾಟಕದ ಸಮೀಕ್ಷೆ

ಒಟ್ಟು 28 ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದವು. ಇದೀಗ ಕರ್ನಾಟಕ ಸಮೀಕ್ಷ ಕೂಡ ಹೊರಬಿದ್ದಿದೆ. ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಾಗಿ ಸಮೀಕ್ಷೆಗಳು ಹೇಳುತ್ತಿವೆ.

ಸಿ ವೋಟರ್‌
ಬಿಜೆಪಿ: 23
ಕಾಂಗ್ರೆಸ್:‌ 3-5
ಜೆಡಿಎಸ್:‌ 2

ಇಂಡಿಯಾ ಟಿವಿ:
ಬಿಜೆಪಿ: 18-22
ಜೆಡಿಎಸ್:‌ 1-3
ಕಾಂಗ್ರೆಸ್:‌ 4-8

ಇಂಡಿಯಾ ಟುಡೇ:
ಬಿಜೆಪಿ: 20-22
ಜೆಡಿಎಸ್: 2-3
ಕಾಂಗ್ರೆಸ್:‌ 3-7

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

3 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

4 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

7 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

10 hours ago