ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳು, ಅವರ ಸಂಬಂಧಿಕರ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿದ್ದಾರೆ.
ಮಂಡ್ಯ, ಬೆಂಗಳೂರು ಮತ್ತು ಬಳ್ಳಾರಿಯಲ್ಲಿನ ವಿವಿಧ ಇಲಾಖಾ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಯುಕ್ತ, ಶೋಧಕಾರ್ಯ ನಡೆಸಿದ್ದಾರೆ.
ಕುಂದಣ ಪಿಡಿಒ ಅವರ ಬೆಂಗಳೂರಿನ ಮೂರು ಮನೆಗಳು, ದಾಬಸ್ಪೇಟೆ ಮತ್ತು ತುಮಕೂರಿನಲ್ಲಿರುವ ಅವರ ಮನೆಗಳ ಮೇಲೆ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಡ್ಯ ಜಿಲ್ಲೆಯ ಮೂರು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು ಬಿಬಿಎಂಪಿ ಅಧಿಕಾರಿ ಮಂಜೇಶ್ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ರೇಡ್ ನಡೆದಿದೆ.
ಬಿಬಿಎಂಪಿ ಅಧಕಾರಿ ಮಂಜೇಶ ಅವರ ಸಂಬಂಧಿಕರಾದ ಹಲಗೂರು ಗ್ರಾ.ಪಂ. ಸದಸ್ಯ ಸುರೇಂದ್ರ ಎಂಬುವವರ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಲಗೂರು ಪಟ್ಟಣದ ಜೆಪಿಎಂ ಬಡಾವಣೆಯಲ್ಲಿನ ಸುರೇಂದ್ರ ಅವರಿಗೆ ಸೇರಿದ ಮನೆ ಹಾಗೂ ಸುರೇಂದ್ರ ಅವರ ಸ್ವಗ್ರಾಮ ಗುಂಡಾಪುರ ಗ್ರಾಮದಲ್ಲಿ ಮನೆಗಳ ಮೇಲೂ ದಾಳಿ ನಡೆದಿದೆ.
ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಕೂಡ್ಲಿಗಿ ಪಟ್ಟಣ, ಗುಡೇಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್, ಮನೆ, ಜಮೀನು ಖರೀದಿ ಮಾಡಿದ್ದಾರೆ ಎನ್ನಲಾಗಿದ್ದು, ಅವರ ಮೆನೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆಯಿಂದಲೇ ಲೋಕಾಯುಕ್ತ ದಾಳಿ ಮಾಡಿ ಅಗತ್ಯ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…