ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳು, ಅವರ ಸಂಬಂಧಿಕರ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿದ್ದಾರೆ.
ಮಂಡ್ಯ, ಬೆಂಗಳೂರು ಮತ್ತು ಬಳ್ಳಾರಿಯಲ್ಲಿನ ವಿವಿಧ ಇಲಾಖಾ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಯುಕ್ತ, ಶೋಧಕಾರ್ಯ ನಡೆಸಿದ್ದಾರೆ.
ಕುಂದಣ ಪಿಡಿಒ ಅವರ ಬೆಂಗಳೂರಿನ ಮೂರು ಮನೆಗಳು, ದಾಬಸ್ಪೇಟೆ ಮತ್ತು ತುಮಕೂರಿನಲ್ಲಿರುವ ಅವರ ಮನೆಗಳ ಮೇಲೆ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಡ್ಯ ಜಿಲ್ಲೆಯ ಮೂರು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು ಬಿಬಿಎಂಪಿ ಅಧಿಕಾರಿ ಮಂಜೇಶ್ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ರೇಡ್ ನಡೆದಿದೆ.
ಬಿಬಿಎಂಪಿ ಅಧಕಾರಿ ಮಂಜೇಶ ಅವರ ಸಂಬಂಧಿಕರಾದ ಹಲಗೂರು ಗ್ರಾ.ಪಂ. ಸದಸ್ಯ ಸುರೇಂದ್ರ ಎಂಬುವವರ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಲಗೂರು ಪಟ್ಟಣದ ಜೆಪಿಎಂ ಬಡಾವಣೆಯಲ್ಲಿನ ಸುರೇಂದ್ರ ಅವರಿಗೆ ಸೇರಿದ ಮನೆ ಹಾಗೂ ಸುರೇಂದ್ರ ಅವರ ಸ್ವಗ್ರಾಮ ಗುಂಡಾಪುರ ಗ್ರಾಮದಲ್ಲಿ ಮನೆಗಳ ಮೇಲೂ ದಾಳಿ ನಡೆದಿದೆ.
ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಕೂಡ್ಲಿಗಿ ಪಟ್ಟಣ, ಗುಡೇಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್, ಮನೆ, ಜಮೀನು ಖರೀದಿ ಮಾಡಿದ್ದಾರೆ ಎನ್ನಲಾಗಿದ್ದು, ಅವರ ಮೆನೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆಯಿಂದಲೇ ಲೋಕಾಯುಕ್ತ ದಾಳಿ ಮಾಡಿ ಅಗತ್ಯ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…