BREAKING NEWS

ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ವಶ

ಬೆಂಗಳೂರು: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ರಾಜ್ಯಾದ್ಯಂತ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರಿನ ಹಲವೆಡೆ ಲೋಕಾಯುಕ್ತ ದಾಳಿ: ಬೆಂಗಳೂರಿನ ಹಲವೆಡೆ ಲೋಕಾಯುಕ್ತ ದಾಳಿಯಾಗಿದೆ. ಕೆ.ಆರ್​​.ಪುರಂ ತಹಶೀಲ್ದಾರ್​ ಅಜಿತ್​​ ರೈ ಮನೆ ಸೇರಿದಂತೆ 10 ಕಡೆ ಲೋಕಾಯುಕ್ತ ದಾಳಿ ಮಾಡಿದ್ದು, ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಅಜಿತ್ ಮನೆಯಲ್ಲಿ ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ. ಅಜಿತ್ ಕೆಲ ದಿನಗಳ ಹಿಂದೆ ಕೆ.ಆರ್​.ಪುರಂನಿಂದ ವರ್ಗಾವಣೆಯಾಗಿದ್ದರು. ಇವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ದಾಳಿ: ಬಾಗಲಕೋಟೆಯಲ್ಲಿ ಸಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿದ್ಯಾಗಿರಿಯಲ್ಲಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಬೀಳಗಿ ಸಹಾಯಕ ನಿರ್ದೇಶಕ ಕೃಷ್ಣ ಶಿರೂರ ಮನೆಗಳಲ್ಲಿ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಪರಿಶೀಲಿಸಿದ್ದಾರೆ.

ಅವರ ಕಚೇರಿಗಳಲ್ಲಿ ಸಹ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು ಚೇತನಾ ಪಾಟೀಲ ಚುನಾವಣೆ ವೇಳೆ ವರ್ಗಾವಣೆಗೊಂಡಿದ್ದರು. ಕೆಲ ದಿನಗಳ ಹಿಂದೆ ಅವರು ಇದೇ ಕಚೇರಿಗೆ ಮರಳಿ ಬಂದಿದ್ದರು. ಲೋಕಾಯುಕ್ತ ಡಿವೈಎಸ್ಪಿಗಳಾದ ಶಂಕರ ರಾಗಿ, ಪು|ಷ್ಪಲತಾ ನೇತೃತ್ವದ ತಂಡ ಪರಿಶೀಲನೆ ನಡೆಸುತ್ತಿದೆ.

ಶಿವಮೊಗ್ಗ, ಚಾಮರಾಜನಗರದಲ್ಲಿ ಲೋಕಾಯುಕ್ತ ದಾಳಿ: ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಸೊರಬ ಪುರಸಭೆಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಸೊರಬ ಪುರಸಭೆಯ ಎಫ್ ಡಿಎ ಚಂದ್ರಕಲಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದವರಾಗಿದ್ದಾರೆ.

ಇ ಸ್ವತ್ತು ಮಾಡಿಕೊಡಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆ ಕಂದಾಯ ನಿರೀಕ್ಷಕ ಚಾಮರಾಜನಗರದಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ನಗರಸಭೆಯ ಕಂದಾಯ ನಿರೀಕ್ಷಕ ನಾರಾಯಣ್ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ.

ತುಮಕೂರಿನಲ್ಲಿ ಕೃಷಿ ಇಲಾಖೆ ಜೆಡಿ ರವಿ ನಿವಾಸದ ಮೇಲೆ ದಾಳಿ: ತುಮಕೂರು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಅವರ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಶಂಕರಪುರದಲ್ಲಿರುವ ನಿವಾಸ ಹಾಗೂ ರಾಮನಗರದ ಫಾರಂ ಹೌಸ್ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ. ತುಮಕೂರು ಕೃಷಿ ಇಲಾಖೆಯಲ್ಲಿ ಜೆಡಿ ಆಗಿ ಕೆಲಸ ನಿರ್ವಹಿಸುತ್ತಿರುವ ರವಿ, ಹಾಸನದಿಂದ ತುಮಕೂರಿಗೆ ವರ್ಗಾವಣೆಯಾಗಿದ್ದರು.

ಬೆಳಗಾವಿ ನಗರದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಬೆಳಗಾವಿ ನಗರದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಹೆಸ್ಕಾಂ ‌ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ದಾಳಿ ಮಾಡಲಾಗಿದೆ. ಸದ್ಯ ಶೇಖರ್ ಬಹುರೂಪಿ ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶೇಖರ್ ಬಹುರೂಪಿ ಅವರು 2019ರಲ್ಲಿ ಅಥಣಿಯಲ್ಲಿ ಕಾರ್ಯನಿರ್ವಹಿಸುವಾಗ ಪ್ರವಾಹದ ಸಂದರ್ಭದಲ್ಲಿ ನಡೆದ ಅವ್ಯವಹಾರ ಸಂಬಂಧ ಅಮಾನತುಗೊಂಡಿದ್ದರು.

ಕೋಲಾರ ನಗರದ ಹಲವೆಡೆ ಲೋಕಾಯುಕ್ತ ದಾಳಿ: KRDL ಎಇಇ ಕೋದಂಡರಾಮಯ್ಯ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರದ ಕುವೆಂಪು ನಗರದ ಮನೆ ಸೇರಿ ಐದು ಕಡೆ ದಾಳಿಯಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಕೋಲಾರ ಲೋಕಾಯುಕ್ತ ಎಸ್​​ಪಿ ಉಮೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ರಾಯಚೂರಿನಲ್ಲೂ ದಾಳಿ: ರಾಯಚೂರು ಜಿಲ್ಲೆ ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಸಿಂಧನೂರು ಪಟ್ಟಣದ ಕಚೇರಿ ಮತ್ತು ಮನೆ ಹಾಗೂ ಕಲಬುರಗಿಯ ನಾಗನಹಳ್ಳಿ-ಖಣದಾಳ ರಸ್ತೆಯಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದೆ.

ಕೊಡಗಿನಲ್ಲಿಯೂ ದಾಳಿ:  ಕೊಡಗಿನಲ್ಲಿ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನಲ್ಲಿ ಎರಡು ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ಅಧಿಕಾರಿ ಬಶೀರ್ ಮನೆ ಜೊತೆಗೆ ಆತನ‌ ಸಹೋದರನ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ನೇತೃತ್ವದಲ್ಲಿ ಕುಶಾಲನಗರ ತಾಲೂಕಿನ ಗೊಂದಿಬಸವನಹಳ್ಳಿಯಲ್ಲಿ ಇರುವ ಬಶೀರ್ ಮನೆ ಮೇಲೆ ದಾಳಿ ಮಾಡಿದ್ದು, 14 ಲಕ್ಷಕ್ಕೂ ಅಧಿಕ ಮೊತ್ತದ ನಗದು, ಮಹತ್ವದ ದಾಖಲಾತಿಗಳು ಪತ್ತೆಯಾಗಿದ್ದು ಪರಿಶೀಲಿಸಿದ್ದಾರೆ.

andolanait

Recent Posts

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

25 mins ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

2 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

5 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

6 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

6 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

6 hours ago