ಇಂದು ( ಜನವರಿ 31 ) ಬೆಳ್ಳಂಬೆಳಗ್ಗೆಯೇ ಹಲವು ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಆರೋಪಡಿಯಲ್ಲಿ ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಹರ್ಷ ಸೇರಿದಂತೆ ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಹಾಸನ, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಮಂಗಳೂರು ಸೇರಿದಂತೆ ವಿವಿಧೆಡೆ ಲೋಕಾ ಅಧಿಕಾರಿಗಳ ಕಚೇರಿ ಹಾಗೂ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಮಂಡ್ಯ ಲೋಕೋಪಯೋಗಿ ಇಲಾಖೆಯ ಇಇ ಆಗಿರುವ ಹರ್ಷ ಅವರ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಮಂಡ್ಯದಲ್ಲಿರುವ ಸಂಬಂಧಿಕರ ಮನೆಗಳು, ಮಂಡ್ಯದಲ್ಲಿರುವ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ಹೌಸ್ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.
ಅಲ್ಲದೇ ಮೈಸೂರಿನ ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೂ ಸಹ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಜೆಪಿ ನಗರದಲ್ಲಿರುವ ಮನೆ, ವಿಜಯನಗರದಲ್ಲಿರುವ ಅಪಾರ್ಟ್ಮೆಂಟ್, ಕೆಆರ್ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಸಹೋದರನ ಮನೆ ಮೇಲೂ ಸಹ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ.
ಹಾಸನದ ಆಹಾರ ನಿರೀಕ್ಷಕ ಜಗನ್ನಾಥ್ ನಿವಾಸ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ಸಹ ದಾಳಿ ನಡೆದಿದೆ.
ಅಲ್ಲದೇ ಚಿಕ್ಕಮಗಳೂರಿನ ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿ ನೇತ್ರಾವತಿ, ತುಮಕೂರಿನ ಶಿರಾ ಗೇಟ್ ಬಳಿ ಇರುವ ಕೆಆರ್ಡಿಎಲ್ ಇಂಜಿನಿಯರ್ ಹನುಮಂತರಾಯಪ್ಪ ಮನೆ ಹಾಗೂ ಕಚೇರಿ ಮೇಲೂ ಸಹ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…