BREAKING NEWS

ಮೈಸೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಇಂದು ( ಜನವರಿ 31 ) ಬೆಳ್ಳಂಬೆಳಗ್ಗೆಯೇ ಹಲವು ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಆರೋಪಡಿಯಲ್ಲಿ ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಹರ್ಷ ಸೇರಿದಂತೆ ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಹಾಸನ, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಮಂಗಳೂರು ಸೇರಿದಂತೆ ವಿವಿಧೆಡೆ ಲೋಕಾ ಅಧಿಕಾರಿಗಳ ಕಚೇರಿ ಹಾಗೂ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಮಂಡ್ಯ ಲೋಕೋಪಯೋಗಿ ಇಲಾಖೆಯ ಇಇ ಆಗಿರುವ ಹರ್ಷ ಅವರ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಮಂಡ್ಯದಲ್ಲಿರುವ ಸಂಬಂಧಿಕರ ಮನೆಗಳು, ಮಂಡ್ಯದಲ್ಲಿರುವ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್‌ಹೌಸ್‌ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಅಲ್ಲದೇ ಮೈಸೂರಿನ ಮುಡಾ ಇಂಜಿನಿಯರ್‌ ಯಜ್ಞೇಂದ್ರ ಮನೆ ಮೇಲೂ ಸಹ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಜೆಪಿ ನಗರದಲ್ಲಿರುವ ಮನೆ, ವಿಜಯನಗರದಲ್ಲಿರುವ ಅಪಾರ್ಟ್‌ಮೆಂಟ್‌, ಕೆಆರ್‌ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಸಹೋದರನ ಮನೆ ಮೇಲೂ ಸಹ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ.

ಹಾಸನದ ಆಹಾರ ನಿರೀಕ್ಷಕ ಜಗನ್ನಾಥ್‌ ನಿವಾಸ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಗನ್ನಾಥ್‌ ಸಹೋದರ ರಿಯಲ್‌ ಎಸ್ಟೇಟ್‌ ಉದ್ಯಮಿ ಕಿರಣ್‌ ನಿವಾಸ ಹಾಗೂ ಕಚೇರಿ ಮೇಲೂ ಸಹ ದಾಳಿ ನಡೆದಿದೆ.

ಅಲ್ಲದೇ ಚಿಕ್ಕಮಗಳೂರಿನ ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿ ನೇತ್ರಾವತಿ, ತುಮಕೂರಿನ ಶಿರಾ ಗೇಟ್‌ ಬಳಿ ಇರುವ ಕೆಆರ್‌ಡಿಎಲ್‌ ಇಂಜಿನಿಯರ್‌ ಹನುಮಂತರಾಯಪ್ಪ ಮನೆ ಹಾಗೂ ಕಚೇರಿ ಮೇಲೂ ಸಹ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.

andolana

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

4 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

4 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

6 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

6 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

9 hours ago