BREAKING NEWS

ಲೋಕಸಮರ 2024: ತಾಯಿಯೊಂದಿಗೆ ಬಂದು ಮತದಾನ ಮಾಡಿ, ಬಳಿಕ ಸ್ಪಲ್ಫಿಗೆ ಪೋಸ್‌ ಕೊಟ್ಟ ರಾಗಾ!

ನವದೆಹಲಿ: ದೇಶಾದ್ಯಂತ ಇಂದು ಆರನೇ ಹಂತದ ಲೋಕಸಭಾ ಚುನಾವಣಾ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಚನಾವಣೆ ನಡಯಲಿದೆ.

ದೆಹಲಿಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್‌ ಗಾಂಧಿ, ಪ್ರಿಯಾಂಗಾ ಗಾಂಧಿ ವಾದ್ರಾ ಅವರು ತಮ್ಮ ಮಕ್ಕಳ ಜತೆಯಾಗಿ ಬಂದು ಮತದಾನ ಮಾಡಿದ್ದಾರೆ.

ಮತದಾನ ಮಾಡಿದ ಬಳಿಕ ರಾಹುಲ್‌ ಗಾಂಧಿ ತಮ್ಮ ತಾಯಿ ಸೋನಿಯಾ ಅವರ ಜತೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ದಾರೆ.

ಪ್ರತಿ ಬಾರಿಯೂ ಒಂದಲ್ಲಾ ಒಂದು ವಿಷಯಗಳನ್ನು ಪ್ರಸ್ತಾಪಪಿಸಿ ಜನರಿಗೆ ಹತ್ತಿರವಾಗುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮತದಾನ ಮಾಡಿದ ಬಳಿಕವೂ ಜನರಿಗೆ ಮತದಾನದ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ.

ನಿಮ್ಮ ಪ್ರತಿ ಮತದಾನವು 30ಲಕ್ಷ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇದು ಸಹಕಾರಿಯಾಲಿದೆ. ಮತ್ತು ಯುವಕರಿಗೆ ವರ್ಷಕ್ಕೆ ಒಂದು ಲಕ್ಷ ರೂ.ಗಳ ಮೊದಲ ಉದ್ಯೋಗ ಖಾತ್ರಿ ಯೋಜನೆಯನ್ನು ಪ್ರಾರಂಭಿಸುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಭುತ್ವದ ಹಬ್ಬದಲ್ಲಿ ನಾನು ಮತ್ತು ನನ್ನ ತಾಯಿ ಮತದಾನದ ಮೂಲಕ ಕೊಡುಗೆ ನೀಡಿದ್ದೇವೆ. ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚಿನ ಮತದಾನ ಮಾಡಿ, ನಿಮ್ಮ ಹಕ್ಕುಗಳಿಗಾಗಿ, ಕಟುಂಬಗಳ ಭವಿಷ್ಯಕ್ಕಾಗಿ ನಿಮ್ಮ ಮತ ಚಲಾಯಿಸಿ ಎಂದು ಮನವಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

3 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

3 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

3 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

3 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

3 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

3 hours ago