BREAKING NEWS

ಏಪ್ರಿಲ್‌ 19ರಿಂದ ಜೂನ್‌ 1 ವರೆಗೆ ಒಟ್ಟು 7 ಹಂತದಲ್ಲಿ ಲೋಕಸಭಾ ಚುನಾವಣೆ: ಆಯುಕ್ತ ರಾಜೀವ್‌ ಕುಮಾರ್

ನವದೆಹಲಿ: ಚುನಾವಣಾ ಆಯಕ್ತ ರಾಜೀವ್‌ ಕುಮಾರ್‌ ಅವರು ಇಂದು (ಮಾ.೧೬) ಲೋಕಸಭಾ ಚುನಾವಣೆ ದಿನಾಂಕವನ್ನು ಪ್ರಕಟ ಮಾಡಿದ್ದಾರೆ.

ಇದೇ ಏಪ್ರಿಲ್‌ 19ರಿಂದ ಜೂನ್‌ 1 ವರೆಗೆ ಒಟ್ಟು 7 ಹಂತದಲ್ಲಿ ದೇಶಾದ್ಯಂತ ಚುನಾವಣೆ ನಡೆಯಲಿದೆ. ಕ್ರಮವಾಗಿ ಏಪ್ರಿಲ್‌ 19, ಏಪ್ರಿಲ್‌ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್‌ 1 ರಂದು ಒಟ್ಟು 10.5 ಲಕ್ಷ ಮತಗಟ್ಟೆಗಳಲ್ಲಿ 55 ಲಕ್ಷ ಮತ ಯಂತ್ರಗಳನ್ನು ಬಳಕೆ ಮಾಡಿಕೊಂಡು ಸುಮಾರು 1.50 ಕೋಟಿ ಚುನಾವಣಾ ಸಿಬ್ಬಂದಿಗಳ ನೇತೃತ್ವದಲ್ಲಿ ಈ ಬಾರಿಯ ಲೋಕಸಭಾ ಚನಾವಣೆ ನಡೆಯಲಿದೆ.

ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್‌ 4 ರಂದು ಪ್ರಕಟವಾಗಲಿದೆ.

ಈ ಬಾರಿ ಒಟ್ಟು 96.8 ಕೋಟಿ ಜನರು ಮತದಾನ ಮಾಡಲಿದ್ದಾರೆ. ಅದರಲ್ಲಿ 2.18 ಲಕ್ಷ ಶತಾಯುಷಿಗಳು ಇದ್ದಾರೆ, 85 ವರ್ಷ ಮೇಲ್ಪಟ್ಟವರು 82 ಲಕ್ಷ ಮಂದಿ ಮತ್ತು ತೃತೀಯ ಲಿಂಗಿಗಳು 48 ಸಾವಿರ ಜನರು ಇದ್ದಾರೆ ಎಂದು ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಲೋಕಸಭಾ ಚುನಾವಣಾ ಮಾಹಿತಿ:

ಪುರುಷ ಮತದಾರರು: 49.70 ಕೋಟಿ
ಮಹಿಳಾ ಮತದಾರರು: 47.10 ಕೋಟಿ
ಶತಾಯುಷಿಗಳು: 2.18 ಲಕ್ಷ
ವಿಶೇಷ ಚೇತನರು: 88 ಲಕ್ಷ
ತೃತೀಯ ಲಿಂಗಿಗಳು: 48 ಸಾವಿರ
ಬಳಸಲಾದ ವಾಹನಗಳು: 4 ಲಕ್ಷ
ಚುನಾವಣಾ ಸಿಬ್ಬಂದಿಗಳು: ‌1.50 ಕೋಟಿ
ಮೊದಲ ಬಾರಿ ಮತದಾರರು: 1.80 ಕೋಟಿ
20-29 ವರ್ಷ ವಯಸ್ಕ ಮತದಾರರು: 19.74 ಕೋಟಿ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…

1 hour ago

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

1 hour ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

2 hours ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

2 hours ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

2 hours ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

3 hours ago