ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್ ಆಗಿದ್ದು, ದೇಶಾದ್ಯಂತ ಏಪ್ರಿಲ್19 ರಿಂದ ಜೂನ್ 1 ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಹಾಗೆಯೇ ರಾಜ್ಯದಲ್ಲಿ ಒಟ್ಟು 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತ ಏಪ್ರಿಲ್ 26 ಮತ್ತು ಎರಡನೇ ಹಂತ ಮೇ 7 ರಂದು ಒಟ್ಟು 28 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿಯೇ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೈಸೂರು ಸೇರಿದಂತೆ ಒಟ್ಟು 14 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತದೆ.
ಏಪ್ರಿಲ್ 26ರಂದು ಚುನಾವಣೆ ನಡೆಯುವ ಕ್ಷೇತ್ರಗಳು: ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಉಡುಪಿ – ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಸೆಂಟ್ರಲ್ ಕೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳು: ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಚಿಕ್ಕೋಡಿ, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಣಕ್ಕಿಳಿದಿದ್ದಾರೆ. ಕಳೆದ ಬಾರಿಯ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗಲಿದೆ ಎಂದು ಊಹಿಸಲಾಗಿತ್ತು, ಆದರೆ ಕೊನೆಯ ಕ್ಷಣದಲ್ಲಿ ಎಲ್ಲಾ ಲೆಕ್ಕಾಚಾರವು ಬದಲಾಗಿ ಒಡೆಯರ್ ಪಾಲಿಗೆ ಟಿಕೆಟ್ ದಕ್ಕಿತು.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…