ಮಂಡ್ಯ: ಇಂದು ( ಜೂನ್ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದುಕೊಳ್ಳುವತ್ತ ಹೆಜ್ಜೆ ಇಟ್ಟಿದೆ.
ಇತ್ತ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ ಕಾಂಗ್ರೆಸ್ನ ವೆಂಕಟರಮಣೇಗೌಡ ವಿರುದ್ಧ ಬೃಹತ್ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಮತ ಎಣಿಕೆಯ ಆರಂಭದಿಂದಲೂ ಮುನ್ನಡೆಯನ್ನು ಸಾಧಿಸುತ್ತಿರುವ ಹೆಚ್ಡಿ ಕುಮಾರಸ್ವಾಮಿ ಹತ್ತನೇ ಸುತ್ತಿನ ನಂತರವೂ ಸಹ ಮುನ್ನಡೆಯನ್ನು ಸಾಧಿಸಿದ್ದಾರೆ.
ಬೆಳಗ್ಗೆ 11.35ರ ಸಮಯಕ್ಕೆ ಕುಮಾರಸ್ವಾಮಿ 1,76,067 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಈ ಸಮಯಕ್ಕೆ ಕುಮಾರಸ್ವಾಮಿ 4,65,777 ಮತಗಳನ್ನು ಪಡೆದುಕೊಂಡಿದ್ದರೆ, ಎದುರಾಳಿ ವೆಂಕಟರಮಣೇಗೌಡ 2,89,710 ಮತಗಳನ್ನು ಪಡೆದುಕೊಂಡಿದ್ದಾರೆ.