Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಮಧು ಬಂಗಾರಪ್ಪ ದುರಹಂಕಾರ ಪ್ರದರ್ಶಿಸುತ್ತಿದ್ದಾರೆ : ಸಿಟಿ ರವಿ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ವರ್ತನೆ ದಾರ್ಷ್ಟ್ಯತೆ ಮತ್ತು ದುರಹಂಕಾರದಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ರವಿ, ಶಿಕ್ಷಣ ಸಚಿವ ಪಠ್ಯ ಪುಸ್ತಕಗಳಿಂದ ಕೆಲ ಪಾಠಗಳನ್ನು ತೆಗೆದಿದ್ದೇವೆ ಅಂತ ಹೇಳದೆ ಕಿತ್ತು ಬಿಸಾಡಿದ್ದೇವೆ ಅಂತ ದುರಹಂಕಾರದಿಂದ ಹೇಳುತ್ತಾರೆ ಎಂದರು. ಯಾವ ಕಾರಣಕ್ಕೆ ಆ ಪಠ್ಯಗಳನ್ನು ತೆಗೆಯಲಾಗಿದೆ ಅಂತ ಅವರು ಸ್ಪಷ್ಟಪಡಿಸಬೇಕಿದೆ, ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡೋದು ಸರಿಯಲ್ಲ ಎಂದು ಮಾಜಿ ಸಚಿವ ಹೇಳಿದರು.

ಅವರು ತೆಗದು ಹಾಕಿದ ಪಾಠಗಳಲ್ಲಿ ಸಮಾಜಘಾತುಕ, ರಾಷ್ಟ್ರಘಾತುಕ ಅಂಶಗಳಿದ್ದರೆ ಅದನ್ನು ಜನರ ಮುಂದೆ ಇಡಲಿ, ಮಕ್ಕಳಲ್ಲಿ ದೇಶಭಕ್ತಿಯನ್ನು ಅನಾವರಣಗೊಳಿಸುವ ಪಾಠಗಳು ಸಮಾಜ ಘಾತುಕ ಅಂತ ಹೇಗೆ ಅನಿಸಿಕೊಳ್ಳುತ್ತವೆ ಎಂದು ರವಿ ಪ್ರಶ್ನಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!