ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ವರ್ತನೆ ದಾರ್ಷ್ಟ್ಯತೆ ಮತ್ತು ದುರಹಂಕಾರದಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ರವಿ, ಶಿಕ್ಷಣ ಸಚಿವ ಪಠ್ಯ ಪುಸ್ತಕಗಳಿಂದ ಕೆಲ ಪಾಠಗಳನ್ನು ತೆಗೆದಿದ್ದೇವೆ ಅಂತ ಹೇಳದೆ ಕಿತ್ತು ಬಿಸಾಡಿದ್ದೇವೆ ಅಂತ ದುರಹಂಕಾರದಿಂದ ಹೇಳುತ್ತಾರೆ ಎಂದರು. ಯಾವ ಕಾರಣಕ್ಕೆ ಆ ಪಠ್ಯಗಳನ್ನು ತೆಗೆಯಲಾಗಿದೆ ಅಂತ ಅವರು ಸ್ಪಷ್ಟಪಡಿಸಬೇಕಿದೆ, ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡೋದು ಸರಿಯಲ್ಲ ಎಂದು ಮಾಜಿ ಸಚಿವ ಹೇಳಿದರು.
ಅವರು ತೆಗದು ಹಾಕಿದ ಪಾಠಗಳಲ್ಲಿ ಸಮಾಜಘಾತುಕ, ರಾಷ್ಟ್ರಘಾತುಕ ಅಂಶಗಳಿದ್ದರೆ ಅದನ್ನು ಜನರ ಮುಂದೆ ಇಡಲಿ, ಮಕ್ಕಳಲ್ಲಿ ದೇಶಭಕ್ತಿಯನ್ನು ಅನಾವರಣಗೊಳಿಸುವ ಪಾಠಗಳು ಸಮಾಜ ಘಾತುಕ ಅಂತ ಹೇಗೆ ಅನಿಸಿಕೊಳ್ಳುತ್ತವೆ ಎಂದು ರವಿ ಪ್ರಶ್ನಿಸಿದರು.
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…