ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ವರ್ತನೆ ದಾರ್ಷ್ಟ್ಯತೆ ಮತ್ತು ದುರಹಂಕಾರದಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ರವಿ, ಶಿಕ್ಷಣ ಸಚಿವ ಪಠ್ಯ ಪುಸ್ತಕಗಳಿಂದ ಕೆಲ ಪಾಠಗಳನ್ನು ತೆಗೆದಿದ್ದೇವೆ ಅಂತ ಹೇಳದೆ ಕಿತ್ತು ಬಿಸಾಡಿದ್ದೇವೆ ಅಂತ ದುರಹಂಕಾರದಿಂದ ಹೇಳುತ್ತಾರೆ ಎಂದರು. ಯಾವ ಕಾರಣಕ್ಕೆ ಆ ಪಠ್ಯಗಳನ್ನು ತೆಗೆಯಲಾಗಿದೆ ಅಂತ ಅವರು ಸ್ಪಷ್ಟಪಡಿಸಬೇಕಿದೆ, ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡೋದು ಸರಿಯಲ್ಲ ಎಂದು ಮಾಜಿ ಸಚಿವ ಹೇಳಿದರು.
ಅವರು ತೆಗದು ಹಾಕಿದ ಪಾಠಗಳಲ್ಲಿ ಸಮಾಜಘಾತುಕ, ರಾಷ್ಟ್ರಘಾತುಕ ಅಂಶಗಳಿದ್ದರೆ ಅದನ್ನು ಜನರ ಮುಂದೆ ಇಡಲಿ, ಮಕ್ಕಳಲ್ಲಿ ದೇಶಭಕ್ತಿಯನ್ನು ಅನಾವರಣಗೊಳಿಸುವ ಪಾಠಗಳು ಸಮಾಜ ಘಾತುಕ ಅಂತ ಹೇಗೆ ಅನಿಸಿಕೊಳ್ಳುತ್ತವೆ ಎಂದು ರವಿ ಪ್ರಶ್ನಿಸಿದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…