BREAKING NEWS

ಮಧ್ಯಪ್ರದೇಶ ಚುನಾವಣಾ ಎಕ್ಸಿಟ್‌ಪೋಲ್‌ ಪ್ರಕಟ: ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ

ಭೋಪಾಲ್‌ : ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇರಲಿದೆ ಎಂದು ಎಕ್ಸಿಟ್‌ಪೋಲ್‌ ಸಮೀಕ್ಷೆಗಳು ಅಭಿಪ್ರಾಯಪಟ್ಟಿವೆ.

2005 ರಿಂದ ರಾಜ್ಯದ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಐದನೇ ಅವಧಿಗೆ ಅಧಿಕಾರದ ನಿರೀಕ್ಷೆಯಲ್ಲಿದ್ದಾರೆ. ಇತ್ತ ಕಮಲ್‌ ನಾಥ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಚಿಸಲು ಕಾಯುತ್ತಿದೆ. ಡಿಸೆಂಬರ್‌ 3 ರಂದು ನಡೆಯುವ ಮತ ಎಣಿಕೆ ನಂತರ ಫಲಿತಾಂಶ ಪ್ರಕಟವಾಗಲಿದ್ದು, ಮತದಾನ ಪ್ರಭು ಯಾರ ಕೈ ಹಿಡಿಯಲಿದ್ದಾನೆ ಎಂಬುದನ್ನು ಕಾದುನೊಡಬೇಕಿದೆ. ನವೆಂಬರ್‌ 17 ರಂದು ಮತದಾನ ನಡೆದಿತ್ತು.

ರಾಜ್ಯದಲ್ಲಿ 230 ಸ್ಥಾನಗಳಿದ್ದು ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ.

ವಿವಿಧ ಸಮೀಕ್ಷಾ ಸಂಸ್ಥೆಗಳು ನೀಡಿರುವ ಫಲಿತಾಂಶ ಇಲ್ಲಿದೆ.̇̇

*ರಿಪಬ್ಲಿಕ್ ಟಿವಿ-ಮ್ಯಾಟ್ರಿಜನ್ ಸಮೀಕ್ಷೆಯ ಪ್ರಕಾರ ಬಿಜೆಪಿ 118-130, ಕಾಂಗ್ರೆಸ್ 97-107 ಇತರೆ 0-2
*ಟಿವಿ 9 ಭಾರತ್ ವರ್ಷ-ಪೋಲ್ಸ್ ಟ್ರಾಟ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 111-121, ಬಿಜೆಪಿ 106-116, ಇತರೆ 0-6
*ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 102-125, ಬಿಜೆಪಿ 100-123, ಇತರೆ 5
*ಶೈನಿಂಗ್‌ ಇಂಡಿಯಾ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 126, ಬಿಜೆಪಿ 98, ಇತರೆ 06
*ದೈನಿಕ್‌ ಬಾಸ್ಕರ್‌ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 105-120, ಬಿಜೆಪಿ 95-115, ಇತರೆ 0-15
*ಡೆಮಾಕ್ರಸಿ ಟೈಮ್ಸ್‌ ನೆಟ್‌ವರ್ಕ್‌ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 114, ಬಿಜೆಪಿ 111, ಇತರೆ 5
*ನ್ಯೂಸ್‌ 24 ಟುಡೇʼಸ್‌ ಚಾಣಕ್ಯ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 75, ಬಿಜೆಪಿ 151, ಇತರೆ 5 ಸ್ಥಾನಗಳನ್ನು ಪಡೆಯಲಿವೆ ಎಂದು ಸಮೀಕ್ಷೆಗಳು ತಿಳಿಸಿವೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

18 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

22 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

22 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

22 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

22 hours ago