BREAKING NEWS

ಮಧ್ಯಪ್ರದೇಶ ಚುನಾವಣಾ ಎಕ್ಸಿಟ್‌ಪೋಲ್‌ ಪ್ರಕಟ: ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ

ಭೋಪಾಲ್‌ : ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇರಲಿದೆ ಎಂದು ಎಕ್ಸಿಟ್‌ಪೋಲ್‌ ಸಮೀಕ್ಷೆಗಳು ಅಭಿಪ್ರಾಯಪಟ್ಟಿವೆ.

2005 ರಿಂದ ರಾಜ್ಯದ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಐದನೇ ಅವಧಿಗೆ ಅಧಿಕಾರದ ನಿರೀಕ್ಷೆಯಲ್ಲಿದ್ದಾರೆ. ಇತ್ತ ಕಮಲ್‌ ನಾಥ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಚಿಸಲು ಕಾಯುತ್ತಿದೆ. ಡಿಸೆಂಬರ್‌ 3 ರಂದು ನಡೆಯುವ ಮತ ಎಣಿಕೆ ನಂತರ ಫಲಿತಾಂಶ ಪ್ರಕಟವಾಗಲಿದ್ದು, ಮತದಾನ ಪ್ರಭು ಯಾರ ಕೈ ಹಿಡಿಯಲಿದ್ದಾನೆ ಎಂಬುದನ್ನು ಕಾದುನೊಡಬೇಕಿದೆ. ನವೆಂಬರ್‌ 17 ರಂದು ಮತದಾನ ನಡೆದಿತ್ತು.

ರಾಜ್ಯದಲ್ಲಿ 230 ಸ್ಥಾನಗಳಿದ್ದು ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ.

ವಿವಿಧ ಸಮೀಕ್ಷಾ ಸಂಸ್ಥೆಗಳು ನೀಡಿರುವ ಫಲಿತಾಂಶ ಇಲ್ಲಿದೆ.̇̇

*ರಿಪಬ್ಲಿಕ್ ಟಿವಿ-ಮ್ಯಾಟ್ರಿಜನ್ ಸಮೀಕ್ಷೆಯ ಪ್ರಕಾರ ಬಿಜೆಪಿ 118-130, ಕಾಂಗ್ರೆಸ್ 97-107 ಇತರೆ 0-2
*ಟಿವಿ 9 ಭಾರತ್ ವರ್ಷ-ಪೋಲ್ಸ್ ಟ್ರಾಟ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 111-121, ಬಿಜೆಪಿ 106-116, ಇತರೆ 0-6
*ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 102-125, ಬಿಜೆಪಿ 100-123, ಇತರೆ 5
*ಶೈನಿಂಗ್‌ ಇಂಡಿಯಾ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 126, ಬಿಜೆಪಿ 98, ಇತರೆ 06
*ದೈನಿಕ್‌ ಬಾಸ್ಕರ್‌ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 105-120, ಬಿಜೆಪಿ 95-115, ಇತರೆ 0-15
*ಡೆಮಾಕ್ರಸಿ ಟೈಮ್ಸ್‌ ನೆಟ್‌ವರ್ಕ್‌ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 114, ಬಿಜೆಪಿ 111, ಇತರೆ 5
*ನ್ಯೂಸ್‌ 24 ಟುಡೇʼಸ್‌ ಚಾಣಕ್ಯ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 75, ಬಿಜೆಪಿ 151, ಇತರೆ 5 ಸ್ಥಾನಗಳನ್ನು ಪಡೆಯಲಿವೆ ಎಂದು ಸಮೀಕ್ಷೆಗಳು ತಿಳಿಸಿವೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago