ಭೂಪಾಲ್: ಕೆಳ ಜಾತಿಯ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಘಟನೆ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿರುವುದಾಗಿ ಶುಕ್ರವಾರ (ಜುಲೈ 7) ವರದಿಯಾಗಿದೆ.
ಕಳೆದ ಜೂನ್ 30 ರಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. 23 ಮತ್ತು 24 ವರ್ಷದ ಇಬ್ಬರು ಯುವಕರ ಮೇಲೆ ಈ ಅಮಾನವೀಯ ಕೃತ್ಯ ಎಸಗಲಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ಮಧ್ಯಪ್ರದೇಶ ಸ್ಥಳೀಯ ಪೊಲೀಸರ ತನಿಖೆಯ ನಂತರ ಯುವಕರ ಮೇಲಿರುವ ಲೈಂಗಿಕ ದೌರ್ಜನ್ಯದ ಆರೋಪಗಳು ಆಧಾರ ರಹಿತವೆಂದು ದೃಢಪಡಿಸಿವೆ. ಆಸ್ತಿ ಸಂಬಂಧಿತ ವಿವಾದಕ್ಕೆ ಆರೋಪಿಗಳು ಹೀಗೆ ಮಾಡಿದ್ದಾರೆ ಎಂಬುದು ತಿಳಿದು ಬಂದಿದೆ. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಘಟನೆಯನ್ನು ಖಂಡಿಸಿದ್ದಾರೆ.
ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಲು ಮತ್ತು ಅವರು ಅಕ್ರಮವಾಗಿ ನಿರ್ಮಿಸಿದ ಆಸ್ತಿಗಳನ್ನು ಕೆಡವಲು ಶಿವಪುರಿ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಲಾಗಿದೆ” ಎಂದು ಅವರು ಹೇಳಿದರು. ಮಧ್ಯಪ್ರದೇಶ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಬೆನ್ನಲ್ಲೇ ಮಲ ತಿನ್ನಿಸಿದ ಘಟನೆ ವರದಿಯಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಾದ ಅಜ್ಮತ್ ಖಾನ್, ವಕೀಲ್ ಖಾನ್, ಆರಿಫ್ ಖಾನ್, ಶಾಹಿದ್ ಖಾನ್, ಇಸ್ಲಾಂ ಖಾನ್, ರಹೀಶಾ ಬಾನೋ ಮತ್ತು ಸೈನಾ ಬಾನೊ ಎಂಬ ಕಿರಾತಕರನ್ನು ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜೈಲಿಗೆ ಕಳುಹಿಸಿದ್ದಾರೆ. ಇನ್ನೊಂದೆಡೆ ಅರಣ್ಯ, ಪೊಲೀಸ್ ಮತ್ತು ಜಿಲ್ಲಾಡಳಿತದ ಜಂಟಿ ತಂಡವು ಅರಣ್ಯ ಭೂಮಿಯಲ್ಲಿ ಮನೆ ನಿರ್ಮಿಸಲಾಗಿದೆ ಎಂಬ ಕಾರಣಕ್ಕಾಗಿ ಆರೋಪಿಗಳ ಕುಟುಂಬದ ಮೂರು ಮನೆಗಳನ್ನು ಭಾಗಶಃ ನೆಲಸಮಗೊಳಿಸಿದೆ.
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…
ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…