BREAKING NEWS

ಮಧ್ಯಪ್ರದೇಶ: ದಲಿತ ಯುವಕರಿಗೆ ಮಲ ತಿನ್ನಿಸಿ ಹೀನ ಕೃತ್ಯ: 7 ಮಂದಿ ಬಂಧನ

ಭೂಪಾಲ್: ಕೆಳ ಜಾತಿಯ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಘಟನೆ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿರುವುದಾಗಿ ಶುಕ್ರವಾರ (ಜುಲೈ 7) ವರದಿಯಾಗಿದೆ.

ಕಳೆದ ಜೂನ್ 30 ರಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. 23 ಮತ್ತು 24 ವರ್ಷದ ಇಬ್ಬರು ಯುವಕರ ಮೇಲೆ ಈ ಅಮಾನವೀಯ ಕೃತ್ಯ ಎಸಗಲಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಮಧ್ಯಪ್ರದೇ‍ಶ ಸ್ಥಳೀಯ ಪೊಲೀಸರ ತನಿಖೆಯ ನಂತರ ಯುವಕರ ಮೇಲಿರುವ ಲೈಂಗಿಕ ದೌರ್ಜನ್ಯದ ಆರೋಪಗಳು ಆಧಾರ ರಹಿತವೆಂದು ದೃಢಪಡಿಸಿವೆ. ಆಸ್ತಿ ಸಂಬಂಧಿತ ವಿವಾದಕ್ಕೆ ಆರೋಪಿಗಳು ಹೀಗೆ ಮಾಡಿದ್ದಾರೆ ಎಂಬುದು ತಿಳಿದು ಬಂದಿದೆ. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಘಟನೆಯನ್ನು ಖಂಡಿಸಿದ್ದಾರೆ.

ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಲು ಮತ್ತು ಅವರು ಅಕ್ರಮವಾಗಿ ನಿರ್ಮಿಸಿದ ಆಸ್ತಿಗಳನ್ನು ಕೆಡವಲು ಶಿವಪುರಿ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಲಾಗಿದೆ” ಎಂದು ಅವರು ಹೇಳಿದರು. ಮಧ್ಯಪ್ರದೇಶ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಬೆನ್ನಲ್ಲೇ ಮಲ ತಿನ್ನಿಸಿದ ಘಟನೆ ವರದಿಯಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಾದ ಅಜ್ಮತ್ ಖಾನ್, ವಕೀಲ್ ಖಾನ್, ಆರಿಫ್ ಖಾನ್, ಶಾಹಿದ್ ಖಾನ್, ಇಸ್ಲಾಂ ಖಾನ್, ರಹೀಶಾ ಬಾನೋ ಮತ್ತು ಸೈನಾ ಬಾನೊ ಎಂಬ ಕಿರಾತಕರನ್ನು ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜೈಲಿಗೆ ಕಳುಹಿಸಿದ್ದಾರೆ. ಇನ್ನೊಂದೆಡೆ ಅರಣ್ಯ, ಪೊಲೀಸ್ ಮತ್ತು ಜಿಲ್ಲಾಡಳಿತದ ಜಂಟಿ ತಂಡವು ಅರಣ್ಯ ಭೂಮಿಯಲ್ಲಿ ಮನೆ ನಿರ್ಮಿಸಲಾಗಿದೆ ಎಂಬ ಕಾರಣಕ್ಕಾಗಿ ಆರೋಪಿಗಳ ಕುಟುಂಬದ ಮೂರು ಮನೆಗಳನ್ನು ಭಾಗಶಃ ನೆಲಸಮಗೊಳಿಸಿದೆ.

andolanait

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

11 mins ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

8 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

8 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

8 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

8 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

8 hours ago