BREAKING NEWS

ಮಹಾಭಾರತವನ್ನು ಕಾಜಿ ನಜ್ರುಲ್ ಇಸ್ಲಾಂ ಬರೆದಿದ್ದಾರೆ : ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ರಾಕೇಶ್ ರೋಷನ್ ಪ್ರಮಾದದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮಹಾಭಾರತವನ್ನು ಪೂಜ್ಯ ಋಷಿ ವೇದವ್ಯಾಸರಿಂದ ಬರೆಯಲಾಗಿಲ್ಲ, ಇದನ್ನು ಬಂಡಾಯ ಕವಿ ಕಾಜಿ ನಜ್ರುಲ್ ಇಸ್ಲಾಂ ಬರೆದಿದ್ದಾರೆ ಎಂದು ಹೇಳಿದ್ದಾರೆ. ಇವರ ಈ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ.

ಕಾಜಿ ನಜ್ರುಲ್ ಇಸ್ಲಾಂ ಬಂಗಾಳದ ಬಂಡಾಯ ಬಾರ್ಡ್ ಎಂದು ಸಾಮಾನ್ಯವಾಗಿ ಉಲ್ಲೇಖಿಸಲ್ಪಡುತ್ತಾರೆ. ಇವರು ವಸಾಹತುಶಾಹಿ ವಿರೋಧಿ ಕವಿತೆಗಳು ಮತ್ತು ಕೋಮು ಸೌಹಾರ್ದವನ್ನು ಉತ್ತೇಜಿಸುವ ಸಾಹಿತ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಇದೀಗ ಮಮತಾ ಬ್ಯಾನರ್ಜಿ ಮಹಾಭಾರತವನ್ನು ಕಾಜಿ ನಜ್ರುಲ್ ಅವರು ಬರೆದಿದ್ದರೂ ಇದರ ಕ್ರೆಡಿಟ್ ವೇದವ್ಯಾಸರಿಗೆ ಸಲ್ಲುತ್ತದೆ ಎಂದು ಹೇಳಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಟಿಎಂಸಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧ್ಯಯನಗಳು ಒಬ್ಬ ವ್ಯಕ್ತಿಯನ್ನು ನಿಜವಾದ ಅರ್ಥದಲ್ಲಿ ಕಲಿಯುವಂತೆ ಮಾಡುವುದಿಲ್ಲ. ಒಬ್ಬ ವ್ಯಕ್ತಿ ವಿಶಾಲವಾದ ಹೃದಯವನ್ನು ಹೊಂದಿರಬೇಕು. ನಮ್ಮ ಮಹಾಪುರುಷರು ಬರೆದದ್ದನ್ನು ಓದಿ ಮತ್ತು ಅರ್ಥಮಾಡಿಕೊಳ್ಳಿ. ರವೀಂದ್ರನಾಥ, ನಜ್ರುಲ್ ಮತ್ತು ವಿವೇಕಾನಂದರ ಬಗ್ಗೆ ಓದಿ. ಮಹಾಭಾರತವನ್ನು ಬರೆದವರು ನಜ್ರುಲ್ ಇಸ್ಲಾಂ ಎಂದರು.

ಈ ಹಿಂದೆ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಚಂದ್ರನಲ್ಲಿಗೆ ಹೋಗಿದ್ದಾರೆ ಎಂದು ಹೇಳಿದ್ದರು. ಅಲ್ಲದೇ ಇಂದಿರಾ ಗಾಂಧಿ ಚಂದ್ರನಲ್ಲಿಗೆ ಹೋದಾಗ ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ರಾಕೇಶ್ ಶರ್ಮಾ ಅವರನ್ನು ಕೇಳಿದ್ದಾರೆ. ಇದಕ್ಕೆ ರಾಕೇಶ್ ರೋಷನ್ ಸಾರೇ ಜಹಾಂ ಸೇ ಅಚ್ಚಾ ಎಂದು ಉತ್ತರಿಸಿದ್ದಾರೆ ಎಂಬ ಹೇಳಿಕೆಗಳನ್ನು ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಷ್ಟು ಮಾತ್ರವಲ್ಲದೇ ಗಗನಯಾತ್ರಿ ರಾಕೇಶ್ ಶರ್ಮಾ ಅವರನ್ನು ಬಾಲಿವುಡ್ ನಟ ಹೃತಿಕ್ ರೋಷನ್ ಅವರ ತಂದೆ ರಾಕೇಶ್ ರೋಷನ್ ಎಂದು ತಪ್ಪಾಗಿ ಹೇಳಿ ಎಲ್ಲರನ್ನೂ ಗೊಂದಲಕ್ಕೀಡುಮಾಡಿದ್ದರು.

lokesh

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

5 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

5 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

6 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

6 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

6 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

7 hours ago