ಕೋಲ್ಕತ್ತಾ : ರಾಕೇಶ್ ರೋಷನ್ ಪ್ರಮಾದದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮಹಾಭಾರತವನ್ನು ಪೂಜ್ಯ ಋಷಿ ವೇದವ್ಯಾಸರಿಂದ ಬರೆಯಲಾಗಿಲ್ಲ, ಇದನ್ನು ಬಂಡಾಯ ಕವಿ ಕಾಜಿ ನಜ್ರುಲ್ ಇಸ್ಲಾಂ ಬರೆದಿದ್ದಾರೆ ಎಂದು ಹೇಳಿದ್ದಾರೆ. ಇವರ ಈ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ.
ಕಾಜಿ ನಜ್ರುಲ್ ಇಸ್ಲಾಂ ಬಂಗಾಳದ ಬಂಡಾಯ ಬಾರ್ಡ್ ಎಂದು ಸಾಮಾನ್ಯವಾಗಿ ಉಲ್ಲೇಖಿಸಲ್ಪಡುತ್ತಾರೆ. ಇವರು ವಸಾಹತುಶಾಹಿ ವಿರೋಧಿ ಕವಿತೆಗಳು ಮತ್ತು ಕೋಮು ಸೌಹಾರ್ದವನ್ನು ಉತ್ತೇಜಿಸುವ ಸಾಹಿತ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಇದೀಗ ಮಮತಾ ಬ್ಯಾನರ್ಜಿ ಮಹಾಭಾರತವನ್ನು ಕಾಜಿ ನಜ್ರುಲ್ ಅವರು ಬರೆದಿದ್ದರೂ ಇದರ ಕ್ರೆಡಿಟ್ ವೇದವ್ಯಾಸರಿಗೆ ಸಲ್ಲುತ್ತದೆ ಎಂದು ಹೇಳಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಟಿಎಂಸಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧ್ಯಯನಗಳು ಒಬ್ಬ ವ್ಯಕ್ತಿಯನ್ನು ನಿಜವಾದ ಅರ್ಥದಲ್ಲಿ ಕಲಿಯುವಂತೆ ಮಾಡುವುದಿಲ್ಲ. ಒಬ್ಬ ವ್ಯಕ್ತಿ ವಿಶಾಲವಾದ ಹೃದಯವನ್ನು ಹೊಂದಿರಬೇಕು. ನಮ್ಮ ಮಹಾಪುರುಷರು ಬರೆದದ್ದನ್ನು ಓದಿ ಮತ್ತು ಅರ್ಥಮಾಡಿಕೊಳ್ಳಿ. ರವೀಂದ್ರನಾಥ, ನಜ್ರುಲ್ ಮತ್ತು ವಿವೇಕಾನಂದರ ಬಗ್ಗೆ ಓದಿ. ಮಹಾಭಾರತವನ್ನು ಬರೆದವರು ನಜ್ರುಲ್ ಇಸ್ಲಾಂ ಎಂದರು.
ಈ ಹಿಂದೆ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಚಂದ್ರನಲ್ಲಿಗೆ ಹೋಗಿದ್ದಾರೆ ಎಂದು ಹೇಳಿದ್ದರು. ಅಲ್ಲದೇ ಇಂದಿರಾ ಗಾಂಧಿ ಚಂದ್ರನಲ್ಲಿಗೆ ಹೋದಾಗ ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ರಾಕೇಶ್ ಶರ್ಮಾ ಅವರನ್ನು ಕೇಳಿದ್ದಾರೆ. ಇದಕ್ಕೆ ರಾಕೇಶ್ ರೋಷನ್ ಸಾರೇ ಜಹಾಂ ಸೇ ಅಚ್ಚಾ ಎಂದು ಉತ್ತರಿಸಿದ್ದಾರೆ ಎಂಬ ಹೇಳಿಕೆಗಳನ್ನು ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಷ್ಟು ಮಾತ್ರವಲ್ಲದೇ ಗಗನಯಾತ್ರಿ ರಾಕೇಶ್ ಶರ್ಮಾ ಅವರನ್ನು ಬಾಲಿವುಡ್ ನಟ ಹೃತಿಕ್ ರೋಷನ್ ಅವರ ತಂದೆ ರಾಕೇಶ್ ರೋಷನ್ ಎಂದು ತಪ್ಪಾಗಿ ಹೇಳಿ ಎಲ್ಲರನ್ನೂ ಗೊಂದಲಕ್ಕೀಡುಮಾಡಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…