BREAKING NEWS

ಮಹಾಭಾರತವನ್ನು ಕಾಜಿ ನಜ್ರುಲ್ ಇಸ್ಲಾಂ ಬರೆದಿದ್ದಾರೆ : ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ರಾಕೇಶ್ ರೋಷನ್ ಪ್ರಮಾದದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮಹಾಭಾರತವನ್ನು ಪೂಜ್ಯ ಋಷಿ ವೇದವ್ಯಾಸರಿಂದ ಬರೆಯಲಾಗಿಲ್ಲ, ಇದನ್ನು ಬಂಡಾಯ ಕವಿ ಕಾಜಿ ನಜ್ರುಲ್ ಇಸ್ಲಾಂ ಬರೆದಿದ್ದಾರೆ ಎಂದು ಹೇಳಿದ್ದಾರೆ. ಇವರ ಈ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ.

ಕಾಜಿ ನಜ್ರುಲ್ ಇಸ್ಲಾಂ ಬಂಗಾಳದ ಬಂಡಾಯ ಬಾರ್ಡ್ ಎಂದು ಸಾಮಾನ್ಯವಾಗಿ ಉಲ್ಲೇಖಿಸಲ್ಪಡುತ್ತಾರೆ. ಇವರು ವಸಾಹತುಶಾಹಿ ವಿರೋಧಿ ಕವಿತೆಗಳು ಮತ್ತು ಕೋಮು ಸೌಹಾರ್ದವನ್ನು ಉತ್ತೇಜಿಸುವ ಸಾಹಿತ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಇದೀಗ ಮಮತಾ ಬ್ಯಾನರ್ಜಿ ಮಹಾಭಾರತವನ್ನು ಕಾಜಿ ನಜ್ರುಲ್ ಅವರು ಬರೆದಿದ್ದರೂ ಇದರ ಕ್ರೆಡಿಟ್ ವೇದವ್ಯಾಸರಿಗೆ ಸಲ್ಲುತ್ತದೆ ಎಂದು ಹೇಳಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಟಿಎಂಸಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧ್ಯಯನಗಳು ಒಬ್ಬ ವ್ಯಕ್ತಿಯನ್ನು ನಿಜವಾದ ಅರ್ಥದಲ್ಲಿ ಕಲಿಯುವಂತೆ ಮಾಡುವುದಿಲ್ಲ. ಒಬ್ಬ ವ್ಯಕ್ತಿ ವಿಶಾಲವಾದ ಹೃದಯವನ್ನು ಹೊಂದಿರಬೇಕು. ನಮ್ಮ ಮಹಾಪುರುಷರು ಬರೆದದ್ದನ್ನು ಓದಿ ಮತ್ತು ಅರ್ಥಮಾಡಿಕೊಳ್ಳಿ. ರವೀಂದ್ರನಾಥ, ನಜ್ರುಲ್ ಮತ್ತು ವಿವೇಕಾನಂದರ ಬಗ್ಗೆ ಓದಿ. ಮಹಾಭಾರತವನ್ನು ಬರೆದವರು ನಜ್ರುಲ್ ಇಸ್ಲಾಂ ಎಂದರು.

ಈ ಹಿಂದೆ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಚಂದ್ರನಲ್ಲಿಗೆ ಹೋಗಿದ್ದಾರೆ ಎಂದು ಹೇಳಿದ್ದರು. ಅಲ್ಲದೇ ಇಂದಿರಾ ಗಾಂಧಿ ಚಂದ್ರನಲ್ಲಿಗೆ ಹೋದಾಗ ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ರಾಕೇಶ್ ಶರ್ಮಾ ಅವರನ್ನು ಕೇಳಿದ್ದಾರೆ. ಇದಕ್ಕೆ ರಾಕೇಶ್ ರೋಷನ್ ಸಾರೇ ಜಹಾಂ ಸೇ ಅಚ್ಚಾ ಎಂದು ಉತ್ತರಿಸಿದ್ದಾರೆ ಎಂಬ ಹೇಳಿಕೆಗಳನ್ನು ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಷ್ಟು ಮಾತ್ರವಲ್ಲದೇ ಗಗನಯಾತ್ರಿ ರಾಕೇಶ್ ಶರ್ಮಾ ಅವರನ್ನು ಬಾಲಿವುಡ್ ನಟ ಹೃತಿಕ್ ರೋಷನ್ ಅವರ ತಂದೆ ರಾಕೇಶ್ ರೋಷನ್ ಎಂದು ತಪ್ಪಾಗಿ ಹೇಳಿ ಎಲ್ಲರನ್ನೂ ಗೊಂದಲಕ್ಕೀಡುಮಾಡಿದ್ದರು.

lokesh

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

1 hour ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

1 hour ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

2 hours ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago