BREAKING NEWS

ಮಹಾಭಾರತವನ್ನು ಕಾಜಿ ನಜ್ರುಲ್ ಇಸ್ಲಾಂ ಬರೆದಿದ್ದಾರೆ : ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ರಾಕೇಶ್ ರೋಷನ್ ಪ್ರಮಾದದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮಹಾಭಾರತವನ್ನು ಪೂಜ್ಯ ಋಷಿ ವೇದವ್ಯಾಸರಿಂದ ಬರೆಯಲಾಗಿಲ್ಲ, ಇದನ್ನು ಬಂಡಾಯ ಕವಿ ಕಾಜಿ ನಜ್ರುಲ್ ಇಸ್ಲಾಂ ಬರೆದಿದ್ದಾರೆ ಎಂದು ಹೇಳಿದ್ದಾರೆ. ಇವರ ಈ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ.

ಕಾಜಿ ನಜ್ರುಲ್ ಇಸ್ಲಾಂ ಬಂಗಾಳದ ಬಂಡಾಯ ಬಾರ್ಡ್ ಎಂದು ಸಾಮಾನ್ಯವಾಗಿ ಉಲ್ಲೇಖಿಸಲ್ಪಡುತ್ತಾರೆ. ಇವರು ವಸಾಹತುಶಾಹಿ ವಿರೋಧಿ ಕವಿತೆಗಳು ಮತ್ತು ಕೋಮು ಸೌಹಾರ್ದವನ್ನು ಉತ್ತೇಜಿಸುವ ಸಾಹಿತ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಇದೀಗ ಮಮತಾ ಬ್ಯಾನರ್ಜಿ ಮಹಾಭಾರತವನ್ನು ಕಾಜಿ ನಜ್ರುಲ್ ಅವರು ಬರೆದಿದ್ದರೂ ಇದರ ಕ್ರೆಡಿಟ್ ವೇದವ್ಯಾಸರಿಗೆ ಸಲ್ಲುತ್ತದೆ ಎಂದು ಹೇಳಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಟಿಎಂಸಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧ್ಯಯನಗಳು ಒಬ್ಬ ವ್ಯಕ್ತಿಯನ್ನು ನಿಜವಾದ ಅರ್ಥದಲ್ಲಿ ಕಲಿಯುವಂತೆ ಮಾಡುವುದಿಲ್ಲ. ಒಬ್ಬ ವ್ಯಕ್ತಿ ವಿಶಾಲವಾದ ಹೃದಯವನ್ನು ಹೊಂದಿರಬೇಕು. ನಮ್ಮ ಮಹಾಪುರುಷರು ಬರೆದದ್ದನ್ನು ಓದಿ ಮತ್ತು ಅರ್ಥಮಾಡಿಕೊಳ್ಳಿ. ರವೀಂದ್ರನಾಥ, ನಜ್ರುಲ್ ಮತ್ತು ವಿವೇಕಾನಂದರ ಬಗ್ಗೆ ಓದಿ. ಮಹಾಭಾರತವನ್ನು ಬರೆದವರು ನಜ್ರುಲ್ ಇಸ್ಲಾಂ ಎಂದರು.

ಈ ಹಿಂದೆ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಚಂದ್ರನಲ್ಲಿಗೆ ಹೋಗಿದ್ದಾರೆ ಎಂದು ಹೇಳಿದ್ದರು. ಅಲ್ಲದೇ ಇಂದಿರಾ ಗಾಂಧಿ ಚಂದ್ರನಲ್ಲಿಗೆ ಹೋದಾಗ ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ರಾಕೇಶ್ ಶರ್ಮಾ ಅವರನ್ನು ಕೇಳಿದ್ದಾರೆ. ಇದಕ್ಕೆ ರಾಕೇಶ್ ರೋಷನ್ ಸಾರೇ ಜಹಾಂ ಸೇ ಅಚ್ಚಾ ಎಂದು ಉತ್ತರಿಸಿದ್ದಾರೆ ಎಂಬ ಹೇಳಿಕೆಗಳನ್ನು ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಷ್ಟು ಮಾತ್ರವಲ್ಲದೇ ಗಗನಯಾತ್ರಿ ರಾಕೇಶ್ ಶರ್ಮಾ ಅವರನ್ನು ಬಾಲಿವುಡ್ ನಟ ಹೃತಿಕ್ ರೋಷನ್ ಅವರ ತಂದೆ ರಾಕೇಶ್ ರೋಷನ್ ಎಂದು ತಪ್ಪಾಗಿ ಹೇಳಿ ಎಲ್ಲರನ್ನೂ ಗೊಂದಲಕ್ಕೀಡುಮಾಡಿದ್ದರು.

lokesh

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago